Article Image

ಕವನ ಸಂಕಲನ ಮಣಿ ಮುಕುಟ ಬಿಡುಗಡೆ

Article Image

ಕವನ ಸಂಕಲನ ಮಣಿ ಮುಕುಟ ಬಿಡುಗಡೆ

ದಿನಾಂಕ 23/3/2025 ಆದಿತ್ಯವಾರದಂದು ನಡೆದ ಜೈನ್ ಮಿಲನ್ ಕಾರ್ಕಳ, ಇದರ ಮಾಸಿಕ ಸಭೆಯಲ್ಲಿ ಮಾಲತಿ ವಸಂತರಾಜ್‌ರವರ ಕವನ ಸಂಕಲನ ಮಣಿ ಮುಕುಟವನ್ನು ಎಸ್.ವಿ.ಟಿ.ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲೆಯಾದ ಮಿತ್ರಪ್ರಭಾ ಹೆಗ್ಡೆಯವರು ಲೋಕಾರ್ಪಣೆ ಮಾಡಿದರು.ಜೈನ್ ಮಿಲನಿನ ನಿರ್ದೇಶಕರು, ಅಧ್ಯಕ್ಷರು,ಕಾರ್ಯದರ್ಶಿಯವರು, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ನಿರಂಜನ ಜೈನ್, ಕುದ್ಯಾಡಿ, ನೇರೆಂಕಿ ಪಾರ್ಶ್ವನಾಥ ಜೈನ್, ವಸಂತರಾಜ್ ಜೈನ್ ರವರು ಉಪಸ್ಥಿತರಿದ್ದರು. ಶ್ರೀವರ್ಮ ಜೈನ್, ಯುವರಾಜ್ ಆರಿಗರವರು ಉಪಸ್ಥಿತರಿದ್ದರು.

ಬಂಟ್ವಾಳ: 33ನೇ ವರ್ಧಂತ್ಯುತ್ಸವ

Article Image

ಬಂಟ್ವಾಳ: 33ನೇ ವರ್ಧಂತ್ಯುತ್ಸವ

ಬಂಟ್ವಾಳ ತಾಲೂಕಿನ ಅತಿಶಯ ಶ್ರೀ ಕ್ಷೇತ್ರ ಅಜ್ಜಿಬೆಟ್ಟು ಬಸದಿ ಭಗವಾನ್ ಶ್ರೀ ಆದಿನಾಥ ತೀರ್ಥಂಕರರ ಜಿಂಬ ಪ್ರತಿಷ್ಠಾ ಮಹೋತ್ಸವದ 33ನೇ ವರ್ಧಂತ್ಯುತ್ಸವವು ಕಾರ್ಕಳ ಶ್ರೀ ಜೈನ ಮಠದ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ಪಾವನ ಸಾನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 02-04-2025ನೇ ಬುಧವಾರ ಜರಗಲಿರುವುದು.

ಮಹಾವೀರ ತೀರ್ಥಂಕರರ ಬಗ್ಗೆ ಭಾಷಣ ಸ್ಪರ್ಧೆ

Article Image

ಮಹಾವೀರ ತೀರ್ಥಂಕರರ ಬಗ್ಗೆ ಭಾಷಣ ಸ್ಪರ್ಧೆ

ರಾಜ್ಯ ಜೈನ ಜಾಗೃತಿ ಸಂಘ (ರಿ) ಕರ್ನಾಟಕ ಬೆಳಗಾವಿ ಇದರ ವತಿಯಿಂದ ಶ್ರೀ ಭಗವಾನ್ ಮಹಾವೀರ ತೀರ್ಥಂಕರರ 2624ನೇಯ ಜನ್ಮ ಕಲ್ಯಾಣದ ಮಹೋತ್ಸವದ ಅಂಗವಾಗಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಮಹಾವೀರ ತೀರ್ಥಂಕರರ ಬಗ್ಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ವಿಷಯ: ಭಗವಾನ್ ಮಹಾವೀರ ತೀರ್ಥಂಕರರ ಜೀವನ ಹಾಗೂ ಧರ್ಮೋಪದೇಶಗಳ ಕುರಿತು. 1) 5 ರಿಂದ 16 ವರ್ಷದೊಳಗಿನ ಮಕ್ಕಳು ಭಾಗವಹಿಸಬಹುದು (ಜೈನ ಧರ್ಮಿಯರು ಮಾತ್ರ) (ಜನನ ಪ್ರಮಾಣ ಪತ್ರ ಕಳುಹಿಸಬೇಕು) 2) ಸದರಿ ಭಾಷಣದ 5 ನಿಮಿಷಗಳ ವಿಡಿಯೋ ಮಾಡಿ ಈ ಕೆಳಗೆ ತಿಳಿಸಿದ ಮೊ: 9916176515 ಹಾಗೂ ಮೊ: 9448644206 ನಂಬರಗಳಿಗೆ ಕಳಿಸಿಕೊಡಬೇಕು 3) ಭಾಷಣದ ವಿಡಿಯೋಗಳನ್ನು ದಿನಾಂಕ 6-04-2025ರೊಳಗಾಗಿ ಕಳಿಸಿಕೊಡಬೇಕು 4) ಸದರಿ ವಿಡಿಯೋಗಳನ್ನು ತಜ್ಞ ವಿದ್ವಾಂಸರು ಹಾಗೂ ಸ್ವಾಮೀಜಿಗಳವರೊಂದಿಗೆ ಪರಿಶೀಲಿಸಿ ನೋಡಿ, ಅದರಲ್ಲಿ ಅತೀ ಉತ್ತಮ ವಿಡಿಯೋ ಮಾಡಿದ ಮಕ್ಕಳ ಭಾಷಣದ ವಿಡಿಯೋಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಎಂದು ಆಯ್ಕೆ ಮಾಡಲಾಗುವುದು. 5) ಸದರಿ ಭಾಷಣದ ಫಲಿತಾಂಶವನ್ನು ದಿನಾಂಕ 10-04-2025 ರಂದು ಪ್ರಕಟಿಸಲಾಗುವುದು 6) ವಿಜೇತರಿಗೆ : ಪ್ರಥಮ ಬಹುಮಾನ ರೂ 1008, ದ್ವಿತೀಯ ಬಹುಮಾನ ರೂ 751, ತೃತೀಯ ಬಹುಮಾನ ರೂ 501ಗಳನ್ನು ನಗದು ರೂಪದಲ್ಲಿ ಕೊಡಲಾಗುವುದು. ವಿಜೇತ ಮಕ್ಕಳು ಅವರ ಬ್ಯಾಂಕಿನ ಅಥವಾ ಅವರ ಪಾಲಕರ ಬ್ಯಾಂಕಿನ ಖಾತೆ ಸಂಖ್ಯೆ ಹಾಗೂ ಐ ಎಫ್ ಎಸ್ ಸಿ ಕೋಡ್ ಹಾಗೂ ಬ್ಯಾಂಕಿನ ಹೆಸರನ್ನು ಮೇಲ್ದಂಡ ಮೊಬೈಲ್ ವಾಟ್ಸಾಪ್‌ಗೆ ಕಳಿಸಬೇಕು. 7) ಭಾಗವಹಿಸಿದ ಮಕ್ಕಳೆಲ್ಲರಿಗೂ ರಾಜ್ಯ ಜೈನ ಜಾಗೃತಿ ಸಂಘ (ರಿ) ವತಿಯಿಂದ ಪ್ರಶಸ್ತಿ ಪತ್ರಗಳನ್ನು ಕೊಡಲಾಗುವುದು.

ಮಂಚೇನಹಳ್ಳಿ: ಧಾರ್ಮಿಕ ಶಿಬಿರ

Article Image

ಮಂಚೇನಹಳ್ಳಿ: ಧಾರ್ಮಿಕ ಶಿಬಿರ

ಮಂಚೇನಹಳ್ಳಿ:‌ ಶ್ರೀ ಭಗವಾನ್ ಬಾಹುಬಲಿ ಟ್ರಸ್ಟ್, ಶ್ರೀ ಕೋಡಿಬ್ರಹ್ಮದೇವರ ಧರ್ಮಸಂಸ್ಥೆಯ ವತಿಯಿಂದ ಇದೇ ಏಪ್ರಿಲ್ 15ರಿಂದ 19ರವರೆಗೆ ಮಕ್ಕಳಿಗೆ ಮತ್ತು ಯುವಕರಿಗೆ ಧಾರ್ಮಿಕ ಶಿಬಿರವನ್ನು ಏರ್ಪಡಿಸಲಾಗಿದೆ. ಐದೂ ದಿನಗಳು ಊಟ ಮತ್ತು ವಸತಿಯ ವ್ಯವಸ್ಥೆ ಮಾಡಲಾಗಿದೆ. ಭಾಗವಹಿಸಲು ಇಚ್ಛಿಸುವವರು ಕೆಳಗಿನ ದೂರವಾಣಿ ಸಂಖ್ಯೆಯಲ್ಲಿ ಹೆಸರನ್ನು ನೀಡಿ ನೊಂದಾಯಿಸಿಕೊಳ್ಳತಕ್ಕದ್ದು. ಉಳಿದುಕೊಳ್ಳುವ ವ್ಯವಸ್ಥೆ ಸೀಮಿತವಾಗಿರುವುದರಿಂದ ಮೊದಲು ಕರೆ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ದೂರವಾಣಿ ಸಂಖ್ಯೆ : ತ್ರಿಶಲಾ ಬ್ರಹ್ಮಯ್ಯ-94484 57738, ವಿ.ಜೆ. ಬ್ರಹ್ಮಯ್ಯ-94480 74801, ಕೆ.ಬಿ. ಅಶೋಕ್ ಕುಮಾರ್-95136 29196, ಪಿ.ಸಿ. ರಾಜೇಶ್-98454 84399, ವಿ.ಎಸ್. ಬ್ರಹ್ಮಪ್ರಕಾಶ್-98450 31482, ಎಂ.ಎಸ್‌. ದೇವರಾಜ್-92422 78089

ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ

Article Image

ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ

ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರವನ್ನು ಮಾಡಿಕೊಂಡು ಬರುತ್ತಿದೆ. ಕಳೆದ 10 ವರ್ಷಗಳಿಂದ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ. 11ನೆಯ ವರ್ಷದಲ್ಲಿ ಕೀರ್ತಿಶೇಷ‌ ಆರ್.‌ ಜೆ. ಅನಂತರಾಜಯ್ಯ ಸಂಸ್ಕರಣೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವನ್ನು ದಿನಾಂಕ 09-03-2025 ನೇ ಬುಧವಾರ ಮಧ್ಯಾಹ್ನ ತುಮಕೂರಿನ "ಸ್ನೇಹ ಸಂಗಮ ಕನ್ವೆನ್‌ಷನ್ ಹಾಲ್", ಶಿರಾ ರಸ್ತೆ, ತುಮಕೂರು ಇಲ್ಲಿ ಏರ್ಪಡಿಸಿ ವಿತರಣೆ ಮಾಡಲಾಯಿತು. ವೇದಿಕೆಯ ಗಣ್ಯರೆಲ್ಲಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮುಖಾಂತರ ಹಾಗೂ ಪಚ್ಚೆ ಪಾರ್ಶ್ವನಾಥ ಸ್ವಾಮಿ ಮತ್ತು ಆರ್.ಜೆ. ಅನಂತರಾಜಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಪೆನುಗೊಂಡ ಪಚ್ಚೆ ಪಾರ್ಶ್ವನಾಥಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾದ ಆರ್.ಪಿ. ಚಂದ್ರಕೀರ್ತಿರವರು ಮಾತನಾಡುತ್ತಾ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಈ ಟ್ರಸ್ಟ್‌ನ ಕೆಲಸವನ್ನು ಗಮನಿಸಿರುವುದರಿಂದ ನೀವು ಗಳಿಸುವಂತಾದಾಗ ಅದರಲ್ಲಿ ಒಮ್ಮೆಯಾದರೂ ಈ ಟ್ರಸ್ಟ್‌ಗೆ ಸಹಾಯ ಮಾಡಿದಲ್ಲಿ ಇನ್ನು ಹೆಚ್ಚು ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ವಿದ್ವಾಂಸರು ವಿದ್ಯೋದಯ ಸಂಸ್ಥೆಯ ಕಾರ್ಯನಿರ್ವಾಹಕ ಅಧಿಕಾರಿಗಳು ಆದ ಪ್ರೊ. ಕೆ. ಚಂದ್ರಣ್ಣನವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತಾನಾಡುತ್ತಾ ಅನಂತರಾಜಯ್ಯನವರು ವ್ಯಾಪಾರ ಧರ್ಮ, ಸಹಾಯ ಧರ್ಮ ಇವರೆಡನ್ನು ಮೈಗೂಡಿಸಿಕೊಂಡು ಇಷ್ಟು ದೊಡ್ಡ ಪ್ರತಿಷ್ಠಾನವನ್ನು ಕಟ್ಟಿ ಬೆಳೆಸಿದರು. ಅವರು ಮಾಡಿದ ಸಂಪಾದನೆಯಲ್ಲಿ ಕಿಂಚಿತ್ ಹಣ ಉಳಿಸಿ ಇವತ್ತು ನಿಮಗೆಲ್ಲಾ ವಿದ್ಯಾರ್ಥಿ ವೇತನವನ್ನು ನೀಡಲು ಕಾರಣ ಕರ್ತರಾಗಿದ್ದಾರೆ. ಅವರ ವೈಯಕ್ತಿಕ ಜೀವನವನ್ನು ಮಾದರಿ ಜೀವನವಾಗಿತ್ತು. ಅವರನ್ನು ಬಲ್ಲ ಎಲ್ಲರೂ ಅವರ ಗುಣಗಳಿಗೆ ತಲೆಬಾಗುತ್ತಿದ್ದರು. ಅಂತಹವರು ಇಂದು ನಮ್ಮ ಮುಂದೆ ದೈಹಿಕವಾಗಿ ಇಲ್ಲ ಮಾನಸಿಕವಾಗಿ ಉಳಿದಿದ್ದಾರೆ. ಅವರ ಆಸೆ ಕೈಗೂಡಬೇಕಾದರೆ ಈ ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳು ಶ್ರಮವಹಿಸಿ ಅಧ್ಯಯನ ಮಾಡಿ ಒಳ್ಳೆಯ ಪದವಿ ಪಡೆದು ಒಳ್ಳೆಯ ಕೆಲಸವನ್ನು ಪಡೆಯಬೇಕೆಂದು ಈ ಮೂಲಕ ಅವರ ಆತ್ಮಕ್ಕೆ ಶಾಂತಿ ನೀಡಿದಂತಾಗುತ್ತದೆ ಹಾಗೂ ನಿಮ್ಮ ತಂದೆ ತಾಯಿಗಳಿಗೂ ಗೌರವ ಸಿಗುತ್ತದೆ. ಈ ಕೆಲಸವನ್ನು ನೀವು ಮಾಡಬೇಕು ಎಂದು ಕಿವಿಮಾತು ಹೇಳಿದರು. ಆರ್.ಜೆ. ಅನಂತರಾಜಯ್ಯನವರ ಈ ಟ್ರಸ್ಟ್‌ನ ಸದಸ್ಯರುಗಳೆಲ್ಲಾ ಒಬ್ಬೊಬ್ಬರು ಒಂದು ಶಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಮಕ್ಕಳಾದ ನಾಗರಾಜು ಮತ್ತು ಪಾರ್ಶ್ವನಾಥ್ ಇವರುಗಳು ಕೂಡ ಆರ್.ಎ. ಸುರೇಶ್ ಕುಮಾರ್‌ರವರ ಜೊತೆ ಸೇರಿ ಟ್ರಸ್ಟ್‌ನ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿಕೊಂಡು ಬರುತ್ತಿದ್ದಾರೆ ಅದಕ್ಕೆ ಅವರ ತಾಯಿಯವರಾದ ಸಾದ್ವಿ ಸರೋಜಮ್ಮನವರ ಪೂರ್ಣ ಬೆಂಬಲ ಆಶೀರ್ವಾದವಿದೆ ಎಂದು, ಈ 11 ನೇ ವರ್ಷದಲ್ಲಿ 19 ವಿದ್ಯಾರ್ಥಿನಿಯರು 14 ಹುಡುಗರು ಒಟ್ಟು 33 ವಿದ್ಯಾರ್ಥಿಗಳಿಗೆ ರೂ. 7,20,000-00 ರೂಪಾಯಿಗಳನ್ನು ವಿತರಣೆ ಮಾಡಲಾಯಿತು. ಎ. ಎನ್. ರಾಜೇಂದ್ರಪ್ರಸಾದ್‌ರವರು ಕೀರ್ತಿಶೇಷ ಆರ್.ಜೆ. ಅನಂತರಾಜಯ್ಯನವರ ಸಮಗ್ರ ಜೀವನ ಚರಿತ್ರೆಯನ್ನು ಸಭೆಗೆ ವಿವರವಾಗಿ ಪರಿಚಯ ಮಾಡಿಕೊಟ್ಟರು. ಪ್ರೊ.ಪಿ.ಪಾರ್ಶ್ವನಾಥ್ ಸಪ್ತಗಿರಿ ಇಂಜಿನಿಯರಿಂಗ್ ಕಾಲೇಜಿನ ಗಣಿತ ಶಾಸ್ತ್ರದ ವಿಭಾಗದ ಮುಖ್ಯಸ್ಥರು ಇವರು ಸಭೆಯಲ್ಲಿ ಆಗಮಿಸಿದ ಮಕ್ಕಳಿಗೆ ಹಿತ ನುಡಿಯನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಖ್ಯಾತ ನೇತ್ರ ತಜ್ಞರಾದ ಡಾ. ಕೆ. ಆರ್. ರಂಗನಾಥ್ ರವರು ಮಕ್ಕಳಿಗೆ ಶ್ರೇಯಸ್ಸು ಬರಲೆಂದು ಹಾಗೂ ಆರ್.ಜೆ. ಅನಂತರಾಜಯ್ಯನವರ ಕುಟುಂಬದವರು ಈ ಕಾರ್ಯಕ್ರಮವನ್ನು ಅನುಚಾನವಾಗಿ ನಡೆಸಿಕೊಂಡು ಬರುತ್ತಿರುವುದು ನಿಮಗೆಲ್ಲಾ ಒಂದು ಬೆಂಬಲವಾಗಿದೆ ಎಂದು ಆಶೀರ್ವಚನ ನೀಡಿದರು. ಜೈನ ಸಮಾಜದ ಹಿರಿಯರಾದ ಶ್ರೇಯಾಂಶ ಕುಮಾರ್‌ರವರು ಮಕ್ಕಳಿಗೆ ಹಿತ ವಚನ ನುಡಿದರು. ಪ್ರೇರಣಾ ಜೈನ್ ರವರು ಪ್ರಾರ್ಥಿಸಿ, ಪೆನಕೊಂಡ ಶ್ರೀ ಪಚ್ಚೆ ಪ್ರತಿಷ್ಠಾನದ ಅಧ್ಯಕ್ಷರಾದ ಆರ್.ಎ. ಸುರೇಶ್‌ ಕುಮಾರ್ ರವರು ಸ್ವಾಗತಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಪಚ್ಚೆ ಪ್ರತಿಷ್ಠಾನದ ಉದ್ದೇಶ ಮತ್ತು ನಿಯಮಗಳಂತೆ ನಾವು ಪ್ರತಿವರ್ಷ ಈ ವಿದ್ಯಾರ್ಥಿ ವೇತನವನ್ನು ಪುರಸ್ಕರಿಸಿ ಕೊಡುತ್ತಲಿದ್ದೇವೆ. ಇದಕ್ಕೆ ಸಾಕ್ಷಿಭೂತರಾಗಿ ಆಗಮಿಸಿರುವ ಎಲ್ಲರಿಗೂ ಸ್ವಾಗತ ಬಯಸಿದರು. ಅಲ್ಲದೇ ಎಲ್ಲರೂ ನಮ್ಮ ತಂದೆಯವರ ಉದ್ದೇಶವನ್ನು ಈಡೇರಿಸಲು ಸಹಕರಿಸಬೇಕೆಂದು ಸಭೆಯಲ್ಲಿ ವಿನಂತಿಸಿಕೊಂಡರು. ಕಾರ್ಯಕ್ರಮದಲ್ಲಿ ಆರ್.‌ ಎಸ್. ಜ್ವಾಲನಪ್ಪನವರು ವಂದನಾರ್ಪಣೆ ಸಲ್ಲಿಸಿದರು. ಟ್ರಸ್ಟಿಗಳಾದ ಆರ್. ಎ. ಪಾರ್ಶ್ವನಾಥ, ಆರ್. ಎ. ನಾಗಾರಾಜುರವರು ಕಾರ್ಯಕ್ರಮ ನಿರ್ವಹಣೆಯನ್ನು ಮಾಡಿಕೊಟ್ಟರು. ಆರ್.ಎನ್. ಮಹಾವೀರ್ ಮತ್ತು ಆರ್.ಪಿ. ಮೋನಿಕಾರವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆ

Article Image

ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆ

ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಥ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುವ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪದ್ಮಶ್ರೀ ಜೈನ್ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ದ.ಕ.ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಟ್ಟು 12 ಮಂದಿ ಶಿಕ್ಷಕಿಯರು ಆಯ್ಕೆಯಾಗಿದ್ದು ಬೆಳ್ತಂಗಡಿ ತಾಲೂಕಿನಿಂದ ಪದ್ಮಶ್ರೀ ಜೈನ್ ಆಯ್ಕೆಯಾಗಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ರಾಜ್ಯಮಟ್ಟದ ಥ್ರೋಬಾಲ್ ಪಂದ್ಯದಲ್ಲಿ ದ.ಕ.ಜಿಲ್ಲಾ ಮಹಿಳಾ ಥ್ರೋಬಾಲ್ ತಂಡವು ಪದ್ಮಶ್ರೀ ಅವರ ನೇತೃತ್ವದಲ್ಲಿ ಭಾಗವಹಿಸಲಿದೆ.

ನರಸಿಂಹರಾಜಪುರ: ಕೇವಲ ಜ್ಞಾನಕಲ್ಯಾಣ ಮಹೋತ್ಸವ

Article Image

ನರಸಿಂಹರಾಜಪುರ: ಕೇವಲ ಜ್ಞಾನಕಲ್ಯಾಣ ಮಹೋತ್ಸವ

ಶ್ರೀ ಜ್ವಾಲಾಮಾಲಿನಿ ಅತಿಶಯ ಕ್ಷೇತ್ರ ಸಿಂಹನಗದ್ದೆ ಬಸ್ತಿಮಠದಲ್ಲಿ ಭಗವಾನ್ ಶ್ರೀ ೧೦೦೮ ಚಂದ್ರಪ್ರಭ ಸ್ವಾಮಿ ಸ್ವಾಮಿಯವರ ಕೇವಲ ಜ್ಞಾನಕಲ್ಯಾಣ ಮಹೋತ್ಸವವು ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾ ಚಾರ್ಯವರ್ಯ ಮಹಾಸ್ವಾಮೀಜಿಗಳವರ ನೇತೃತ್ವ, ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದಲ್ಲಿ ಇಂದು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು: ಕರ್ನಾಟಕ ಜೈನ ಅಸೋಸಿಯೇಷನ್ ವತಿಯಿಂದ ನಡೆದ ಸಮಸ್ತ ಕರ್ನಾಟಕ ಜೈನ ಸಮುದಾಯ ಸಭೆ

Article Image

ಬೆಂಗಳೂರು: ಕರ್ನಾಟಕ ಜೈನ ಅಸೋಸಿಯೇಷನ್ ವತಿಯಿಂದ ನಡೆದ ಸಮಸ್ತ ಕರ್ನಾಟಕ ಜೈನ ಸಮುದಾಯ ಸಭೆ

ರಾಜ್ಯದಲ್ಲಿ ಜೈನ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಬದ್ಧವಾಗಿದ್ದು ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಅವರಿಂದು ಇಲ್ಲಿನ ಕರ್ನಾಟಕ ಜೈನ ಅಸೋಸಿಯೇಷನ್ ವತಿಯಿಂದ ನಡೆದ ಸಮಸ್ತ ಕರ್ನಾಟಕ ಜೈನ ಸಮುದಾಯ ಸಭೆಯಲ್ಲಿ ಸಮುದಾಯದ ಪರವಾಗಿ ಮನವಿ ಪತ್ರ ಸ್ವೀಕರಿಸಿ ಮಾತನಾಡಿದರು. ರಾಜ್ಯದ 44 ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಅಥವಾ ಜೈನ ಜನಸಂಖ್ಯೆಗೆ ಅನುಗುಣವಾಗಿ ಜೈನರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯ ಮೀಸಲಿಡಬೇಕು, ಇಲ್ಲಿಯವರೆಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಸ್ಥಾನ ಜೈನ ಸಮಾಜಕ್ಕೆ ಸಿಕ್ಕಿಲ್ಲ ನಿಗಮದಲ್ಲಿ ಜೈನ ನಿರ್ದೇಶಕರು ಆಗಿಲ್ಲ ಸರ್ಕಾರ ಜೈನ ಶಿಕ್ಷಣ ಸಂಸ್ಥೆಗಳಲ್ಲಿ ಮೊಟ್ಟೆ ಕೊಡುವ ನಿರ್ಧಾರ ಸರ್ಕಾರ ಹಿಂತೆಗೆದ್ದುಕೊಳ್ಳಬೇಕೆಂದು ಪತ್ರದಲ್ಲಿ ತಿಳಿಸಲಾಗಿದೆ ಎಂದರು. ಮಾಜಿ ಮುಖ್ಯಮಂತ್ರಿ ಹಾಗೂ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ್ ಸವದಿ ಮಾತನಾಡಿ ವರೂರು ಶ್ರೀ ಕ್ಷೇತ್ರದ ಗುಣದರ ನoದಿ ಮಹಾರಾಜರು ಸರ್ಕಾರ ಮೂರು ಬೇಡಿಕೆಗಳ ಈಡೇರಿಕೆಗೆ ತಿಳಿಸಿದ್ದು , ಈ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಪ್ರತ್ಯೇಕ ಹಾಸ್ಟೆಲ್‌ಗಳನ್ನು ನಿರ್ಮಿಸಲು ತಿಳಿಸಿದ್ದು, ಈ ಕಾರ್ಯಕ್ಕೆ ಸಚಿವರು ಉತ್ಸುಕರಾಗಿದ್ದಾರೆ ಎಂದರು. ಬೇರೆ ಸರ್ಕಾರಗಳಿಂದ ಉತ್ತರ ಸಿಗುತ್ತಿತ್ತು ಆದರೆ ಕಾರ್ಯಗತವಾಗುತ್ತಿರಲಿಲ್ಲ ಆದರೆ ಸಚಿವರಾದ ಜಮೀರ್ ಅಹಮದ್ ರವರಿಂದ ಇಂದು ಕಾರ್ಯಾಗತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ಕೂಅಧಿವೇಶನಕ್ಕೆ ಮುನ್ನ ಒಂದು ಪ್ರಾಯೋಗಿಕ ಶಾಲೆ ಜೈನರಿಗಾಗಿ ನಿರ್ಮಿಸಲು ತಿಳಿಸಲಾಗಿತ್ತು ಆದರೆ ಪ್ರಾಯೋಗಿಕವಾಗಿ ಎರಡು ಶಾಲೆಗಳನ್ನು ಸರ್ಕಾರ ಮಂಜೂರು ಮಾಡಿದೆ ಎಂದರು. ಕರ್ನಾಟಕ ಜೈನ್ ಅಸೋಸಿಯೇಷನ್ ಅಧ್ಯಕ್ಷ ಎಸ್. ಜಿತೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಕಂಬದಹಳ್ಳಿ ಜೈನಮಠದ ಸ್ವಸ್ತಿಶ್ರೀ ಬಾನುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳವರು ಪಾವನ ಸಾನ್ನಿಧ್ಯ ಆಶೀರ್ವಚನ ನೀಡಿದರು. ಪುರೋಹಿತ ರತ್ನ ದಿವ್ಯ ಪಂಡಿತ್ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಯೋಜನಾ ಹಾಗೂ ಸಂಖ್ಯೆಕ ಸಚಿವರಾದ ಡಿ. ಸುಧಾಕರ್, ಮಾಜಿ ಸಚಿವ ವೀರ್ ಕುಮಾರ್ ಪಾಟೀಲ್, ಕರ್ನಾಟಕ ಜೈನ್ ಅಸೋಸಿಯೇಷನ್ ಪದಾಧಿಕಾರಿಗಳಾದ ರಾಜಕೀರ್ತಿ ಕಲಾ ಗೌಡ, ಶೀತಲ್ ಗೌಡ ಪಾಟೀಲ್, ಆಶಾ ಪ್ರಭು, ಡಾ ನೀರಜಾ ನಾಗೇಂದ್ರ ಕುಮಾರ್, ಧರಣಿಂದ್ರ ಕುಮಾರ್ ಪ್ರಶಾಂತ್, ಎಂ. ಎಂ. ಜಿನೇಂದ್ರ, ಶೀತಲ ಕುಮಾರ್, ಮಾಳ ಹರ್ಷೇಂದ್ರ ಜೈನ್, ವಿ ಜೇ. ಬ್ರಹ್ಮಯ್ಯ, ಪದ್ಮಶ್ರೀ, ಪದ್ಮಿನಿ, ಅಜಿತ್ ಕುಮಾರ್, ಮಹಾವೀರ್, ಸ್ವರೂಪ್, ಜಿನೇಂದ್ರ, ಅನಿಲ್ ಕುಮಾರ್, ಕೋಮಲ ಬ್ರಹ್ಮದೇವಯ್ಯ, ಪ್ರಕಾಶ್ ಜೆ. ಪಿ. ರಾಜೇಶ್, ಅಶೋಕ್ ಕುಮಾರ್ ಸೇರಿದoತೆ ಕರ್ನಾಟಕದ ವಿವಿಧ ಭಾಗಗಳಿಂದ ಕಾರ್ಯಕಾರಿ ಸಮಿತಿಯ ಸದಸ್ಯರುಗಳು ಭಾಗವಹಿಸಿದ್ದರು. ಕರ್ನಾಟಕ ಜೈನ್ ಅಸೋಸಿಯೇಷನ್ ಸಹಕಾರ್ಯದರ್ಶಿ, ರತ್ನತ್ರಯ ಕ್ರಿಯೇಷನ್ ಡಾ. ನೀರಜಾ ನಾಗೇಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು .

ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ

Article Image

ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ

ಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿಯಲ್ಲಿರುವ ಶ್ರೀ ಮದ್ದೇವಾಧಿದೇವ ಭ| ಶ್ರೀ ೧೦೦೮ ಮುನಿಸುವೃತನಾಥ ತೀರ್ಥಂಕರ ಜಿನಮಂದಿರದಲ್ಲಿ ಪಂಚಾಮೃತ ಅಭಿಷೇಕ ಹಾಗೂ ಮಸ್ತಕಾಭಿಷೇಕ ಮತ್ತು ಮಹಾ ಶಾಂತಿಮಂತ್ರ ಪಠಣ, ಶ್ರೀ ಜ್ವಾಲಮಾಲಿನಿ ದೇವಿ ಹಾಗೂ ಶ್ರೀ ಪದ್ಮಾವತಿ ದೇವಿಯವರ ಪೂಜಾ, ಶೃಂಗಾರ, ಉಡಿತುಂಬುವ ಕಾರ್ಯಕ್ರಮವು ಪ. ಪೂ. ಆಚಾರ್ಯ ಶ್ರೀ ೧೦೮ ಜಿನಸೇನ ಮಹಾರಾಜರು ಹಾಗೂ ಪ. ಪೂ. ೧೦೮ ಸಂಯಮ ಸಾಗರ ಮುನಿಮಹಾರಾಜರುಗಳ ಮಂಗಳ ಆಶೀರ್ವಾದಗಳೊಂದಿಗೆ ಮತ್ತು ನಾಂದಣಿ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಜಿನಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರು, ಕೊಲ್ಹಾಪುರ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ದಿವ್ಯಸಾನ್ನಿಧ್ಯದಲ್ಲಿ ಮಾ. 29ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಡ್ಯ: ಮೂಲ ನಕ್ಷತ್ರ ಪೂಜಾ ಮಹೋತ್ಸವ

Article Image

ಮಂಡ್ಯ: ಮೂಲ ನಕ್ಷತ್ರ ಪೂಜಾ ಮಹೋತ್ಸವ

ಮಂಡ್ಯ: ಶ್ರೀ ಅತಿಶಯ ಕ್ಷೇತ್ರವಾದ ಶ್ರೀ ರಂಗಪಟ್ಟಣ ಕಾವೇರಿ ನದಿಯ ದ್ವೀಪದಲ್ಲಿರುವ ಭ| ಶ್ರೀ ೧೦೦೮ ಆದಿನಾಥ ತೀರ್ಥಂಕರರ ಬಸದಿಯಲ್ಲಿ ಶ್ರೀ ಮೂಲ ನಕ್ಷತ್ರ ಪೂಜಾ ಮಹೋತ್ಸವ, ಶ್ರೀ 1008 ವೃಷಭ ತೀರ್ಥಂಕರರಿಗೆ ಮಹಾಭಿಷೇಕ ಪೂಜೆ 8-30 ಗಂಟೆಗೆ ಹಾಗೂ ಧರಣೇಂದ್ರ ಪದ್ಮಾವತಿ ಅಮ್ಮನವರಿಗೆ ವಿಶೇಷ ಅಭಿಷೇಕ ಪೂಜೆ, ಲಕ್ಷ ಹೂವಿನ ಅಲಂಕಾರ ಪೂಜೆ ಮತ್ತು ಮಧ್ಯಾಹ್ನ 12-00 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಮಹಾ ಮಂಗಳಾರತಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಾ. 22ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕ

Article Image

ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕ

ಮೂಡುಬಿದಿರೆ: ದರೆಗುಡ್ಡೆಯಲ್ಲಿರುವ ಶ್ರೀ ೧೦೦೮ ಅನಂತನಾಥ ಸ್ವಾಮಿ ಬಸದಿಯಲ್ಲಿ ಅಷ್ಟಮ ನಂದೀಶ್ವರದ ೫೨ ಜಿನಬಿಂಬಗಳಿಗೆ ೫೪ ಕಲಶಗಳಿಂದ ಮಹಾಭಿಷೇಕವು ಮೂಡುಬಿದಿರೆ ಶ್ರಿ ಜೈನ ಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಮಾ. 23ರಂದು ನೆರವೇರಲಿದೆ. ದಿನಾಂಕ 22-03-2025ನೇ ಶನಿವಾರ ಗಂಟೆ 9ಕ್ಕೆ ನೂತನ ನಂದೀಶ್ವರ 52 ಅರಿಹಂತರ ಜಿನಬಿಂಬಗಳು ಪೂಜಾ ಸ್ಥಳಕ್ಕೆ ಆಗಮನ, ಗಂಟೆ 10ರಿಂದ ನಂದೀಶ್ವರರ 52 ಅರಿಹಂತರಿಗೆ ಪ್ರತ್ಯೇಕ ಪಂಚಾಮೃತ ಅಭಿಷೇಕ ನೆರವೇರಲಿರುವುದು ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರಿನ ಯಲಹಂಕದಲ್ಲಿ ನೂತನ ಜೈನ್ ಮಿಲನ್ ಶಾಖೆ ಪ್ರಾರಂಭ

Article Image

ಬೆಂಗಳೂರಿನ ಯಲಹಂಕದಲ್ಲಿ ನೂತನ ಜೈನ್ ಮಿಲನ್ ಶಾಖೆ ಪ್ರಾರಂಭ

ಬೆಂಗಳೂರು ಭಾರತೀಯ ಜೈನ್ ಮಿಲನ್ ವಲಯ ಎಂಟರ ಅಡಿಯಲ್ಲಿ ನೂತನವಾಗಿ ಬೆಂಗಳೂರಿನ ಯಲಹಂಕದಲ್ಲಿ ಜೈನ್ ಮಿಲನ್ ಶಾಖೆ ಪ್ರಾರಂಭಿಸಲಾಗಿದೆ. ಯಲಹಂಕ ಜೈನ್ ಮಿಲನ್ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಂಬದಹಳ್ಳಿ ಜೈನಮಠದ ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಗಳವರು ಪಾವನ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಕಾರ್ಯಧ್ಯಕ್ಷರಾದ ಧರ್ಮಸ್ಥಳ ಸುರೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಬ್ಬಕ್ಕ ರಾಣಿ ಪ್ರಶಸ್ತಿ ಪುರಸ್ಕೃತರು, ಬೆಂಗಳೂರು ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರು ಆದ ಅನಿತಾ ಸುರೇಂದ್ರ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷರು, ರತ್ಮಾತ್ರಯ ಧಾರವಾಹಿಯ ನಿರ್ದೇಶಕರಾದ ಡಾ. ನೀರಜಾ ನಾಗೇಂದ್ರ ಕುಮಾರ್ ಉಪನ್ಯಾಸ ನೀಡಿದರು. ಪ್ರೇಮ ಸುಖಾನಂದ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು ಕಾರ್ಯಕ್ರಮದಲ್ಲಿ ಭಾರತೀಯ ಜೈನ್ ಮಿಲನ್ ವಲಯ 8 ರ ಪ್ರದೀಪ್, ಶ್ಯಾಮಲಾ ಪ್ರಸಾದ್, ವಿಲಾಸ್ ಪಾಸಣ್ಣನವರ್, ಪಿ.ಚರಣ್, ವೃಷಭರಾಜು, ರೇಷ್ಮಾ, ಚಂದ್ರನಾಥ ಟ್ರಸ್ಟ್ ಭೀಮಣ್ಣ ಕೋಟೆ, ಜೈನ್ ಮಿಲನ್ ವಲಯ 8 ರ ಜoಟಿ ಕಾರ್ಯದರ್ಶಿ ಸುಖಾನಂದ, ಇನ್ನಿತರರು ಭಾಗವಹಿಸಿದ್ದರು.

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಸಂಪನ್ನ

Article Image

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವ ಸಂಪನ್ನ

ವೇಣೂರು: ರಥೋತ್ಸವದಂತಹ ಪುಣ್ಯ ಕಾರ್ಯ ಗಳಲ್ಲಿ ನಿಷ್ಠೆ ಯಿಂದ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಲ್ಲಿ ಜಿನೇಂದ್ರ ಭಗವಂತರ ಅನುಗ್ರಹ ನಮಗೆ ಪ್ರಾಪ್ತವಾಗುತ್ತದೆ. ಸಮ್ಯಕ್ ಜ್ಞಾನ, ಸಮ್ತಕ್ ದರ್ಶನ ಮತ್ತು ಸಮ್ಯಕ್ ಚಾರಿತ್ರ್ಯದ ಪ್ರತೀಕವೇ ರಥೋತ್ಸವ. ಇದರಿಂದ ಶ್ರಾವಕ-ಶ್ರಾವಕಿಯರಾದ ನಮ್ಮಲ್ಲಿ ಧಾರ್ಮಿಕ ಪ್ರಜ್ಞೆಯು ಜಾಗೃತವಾಗುತ್ತದೆ ಎಂದು ಮೂಡಬಿದ್ರೆ ಶ್ರೀ ಜೈನಮಠದ ಪ. ಪೂ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರು ನುಡಿದರು. ಅವರು ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನವಿತ್ತರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಶ್ರೀ ದಿಗಂಬರ ಜೈನ ತೀರ್ಥ ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ವಹಿಸಿ, ಮಾತನಾಡಿ ಈ ವರ್ಷದಿಂದ ವೇಣೂರು ಯಾತ್ರಿ ನಿವಾಸದಲ್ಲಿ “ಶ್ರುತ ಭಂಡಾರ” ಸ್ವಾಧ್ಯಾಯ ಕೇಂದ್ರ ಪ್ರಾರಂಭಿಸಿದ್ದು, ಶ್ರಾವಕ-ಶ್ರಾವಕಿಯರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿನಂತಿಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೂಡುಬಿದಿರೆ ಇವರು “ಶ್ರುತ ಭಂಡಾರ” ಸ್ವಾಧ್ಯಾಯ ಕೇಂದ್ರವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕಳೆದ ಬಾರಿಯ ಮಹಾಮಸ್ತಕಾಭಿಷೇಕದ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ನೆರವೇರಿರುವುದಕ್ಕೆ ಸಮಿತಿಯ ಪದಾಧಿಕಾರಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು ಹಾಗೂ ವೇಣೂರು ತೀರ್ಥಕ್ಷೇತ್ರದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹಾಗೂ ಯಾತ್ರಾರ್ಥಿಗಳ ಅನುಕೂಲಕ್ಕೆ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಿಗೆ ಸರಕಾರದ ಅನುದಾನಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು. ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ: ರಥೋತ್ಸವದ ಧಾರ್ಮಿಕ ಸಭೆಯಲ್ಲಿ 90ವರ್ಷ ದಾಟಿದ ಹಿರಿಯ ಶ್ರಾವಕಿ ಗುಣಾವತಿ ಪಿ.ಎ. ಆಳ್ವ ಪಂಜಾಲ್‌ಬೈಲು, ಹಿರಿಯ ಶ್ರಾವಕ ಜಗತ್ಪಾಲ ಮುದ್ಯ ಕತ್ತೋಡಿ ಹಾಗೂ ಹಿರಿಯ ಶ್ರಾವಕಿ ಗುಣಾವತಿ ಅಮ್ಮ ಬರಮೇಲು ಇವರನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಇತ್ತೀಚೆಗೆ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪಡೆದ ಮಾಂಡೋವಿ ಮೋಟರ್ಸ್‌ನ ಚೀಫ್ ಜನರಲ್ ಮೇನೆಜರ್ ನೇರೆಂಕಿ ಪಾರ್ಶ್ವನಾಥ ಜೈನ್, ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾದ ದ್ವಿಶಾನ್ ಜೈನ್ ಕಂಚ ಇವರನ್ನು ಗೌರವಿಸಲಾಯಿತು. 2024ರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯ ಪ್ರತಿಭಾವಂತ ಜೈನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ವಿದ್ಯಾರ್ಥಿ ವೇತನ ಹಾಗೂ ಪ್ರತಿಭಾ ಪುರಸ್ಕಾರದ ಪ್ರಾಯೋಜಕರುಗಳಾದ ದಿ. ಅಂತಪ್ಪ ಆಳ್ವರು, ಬಡಕೋಡಿ ದಿ. ಆದಿರಾಜ ಶೆಟ್ಟಿ, ಮಾರಗುತ್ತು ದಿ. ವಿಜಯರಾಜ ಅಧಿಕಾರಿ ಕುಟುಂಬಸ್ಥರನ್ನು ಹಾಗೂ ಅಕ್ಷಯ ಕುಮಾರ್ ಕಂಬಳಿ ಉಜಿರೆ ಮೂಡುಬಿದಿರೆಯ ಎಮ್. ವಿ. ಶೆಟ್ಟಿ ಇವರನ್ನು ಗೌರವಿಸಲಾಯಿತು. ಚಾರ್ವಿ ಪ್ರಾರ್ಥಿಸಿ, ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿ, ವಿ. ಪ್ರವೀಣ್ ಕುಮಾರ್ ಇಂದ್ರ ಸ್ವಾಗತಿಸಿದರು. ಸಮಿತಿ ಕೋಶಾಧಿಕಾರಿ ಪಿ. ಜಯರಾಜ್ ಕಂಬಳಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಿತಿ ಜೊತೆ ಕಾರ್ಯದರ್ಶಿ ಮಹಾವೀರ್ ಜೈನ್ ಮೂಡುಕೋಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವೇಣೂರು, ಮೂಡುಬಿದಿರೆ, ಪರುಷಗುಡ್ಡೆ ಜಿನಭಜನಾ ತಂಡಗಳಿಂದ ಜಿನಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಉತ್ಸವ, ಶ್ರೀ ಕೊಡಮಣಿತ್ತಾಯ ದೈವದ ನೇಮ, ಬಾಹುಬಲಿ ಸ್ವಾಮಿಗೆ 24 ಕಲಶಗಳಿಂದ ಪಾದಾಭಿಷೇಕ, ದ್ವಜಾವರೋಹಣದೊಂದಿಗೆ ರಥಯಾತ್ರಾ ಮಹೋತ್ಸವ ಸಂಪನ್ನಗೊಂಡಿತು.

ಪೂಜಾ ಕಾರ್ಯಕ್ರಮ

Article Image

ಪೂಜಾ ಕಾರ್ಯಕ್ರಮ

ಮೂಡುಬಿದಿರೆ: ದರೆಗುಡ್ಡೆಯಲ್ಲಿರುವ ಶ್ರೀ 1008 ಅನಂತನಾಥ ಸ್ವಾಮಿ ಬಸದಿಯಲ್ಲಿ ಬೆಳಗ್ಗೆ ಗಂಟೆ 9ರಿಂದ ಶ್ರೀ 1008 ಅನಂತನಾಥ ಸ್ವಾಮಿಗೆ ಕ್ಷೀರಾಭಿಷೇಕ, ಅಷ್ಟಮ ನಂದೀಶ್ವರದ 52 ಜಿನಬಿಂಬಗಳಿಗೆ 54 ಕಲಶಗಳಿಂದ ಮಹಾಭಿಷೇಕವು ಮೂಡುಬಿದಿರೆ ಶ್ರಿ ಜೈನ ಮಠದ ಪ. ಪೂ. ಭಾರತಭೂಷಣ ಡಾ. ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯ, ನೇತೃತ್ವ ಮತ್ತು ಆ‌ಶೀರ್ವಚನದೊಂದಿಗೆ ಮಾ. 22ರಂದು ನೆರವೇರಲಿರುವುದು.

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

Article Image

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದು: ಅಜಿತ್‌ ಜೈನ್‌ ಅಭಿಮತ

ಜೈನ ಧರ್ಮವು ವಿಶ್ವದ ಶ್ರೇಷ್ಠ ಧರ್ಮಗಳಲ್ಲಿ ಒಂದಾಗಿದೆ. ಯಾವುದೇ ಆಸೆ ಪೂರೈಸಲು ಪೂಜೆ ಮಾಡಬಾರದು. ಬದಲಿಗೆ ಜಿನನ ಗುಣಗಳನ್ನು ಅನುಸರಿಸುತ್ತ ಅವರ ಹಾಗೆ ನಾನೂ ಕೂಡ ಆತ್ಮ ಸಾಕ್ಷತ್ಕಾರವನ್ನು ಹೊಂದುವ ಸಲುವಾಗಿ ಪ್ರಾರ್ಥಿಸಬೇಕು ಎಂದು ಅಜಿತ್‌ ಜೈನ್‌ ಕೊಕ್ರಾಡಿ ಇವರು ಮೂಡುಬಿದಿರೆಯ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಜೈನ ವಿದ್ಯಾರ್ಥಿಗಳಿಗೆ ನಡೆದ ಅಷ್ಟ ವಿಧಾರ್ಚನ ಪೂಜಾ ತರಬೇತಿ ಶಿಬಿರದ ಉದ್ಘಾಟನೆಯನ್ನು ಮಾಡಿ ಹೇಳಿದರು. ಮುಂದುವರಿದು ಮಾತಾನಾಡಿದ ಅವರು ಜೈನ ಧರ್ಮದ ವಿಧಿ ವಿಧಾನಗಳನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು. ಜನನಿಗೆ ಅರ್ಘ್ಯ ನೀಡುವ ಪ್ರಕ್ರಿಯೆಯ ಅರ್ಥವನ್ನು ವಿದ್ಯಾರ್ಥಿಗಳು ಅರಿಯಬೇಕು ಎಂದು ಸಲಹೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಕೃಷ್ಣರಾಜ ಹೆಗ್ಗಡೆ ಮಾತನಾಡಿ ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಪರಿಶ್ರಮವನ್ನು ಶ್ಲಾಘಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್‌ ಜೈನ್ ಮಾತನಾಡಿ ವಿದ್ಯಾರ್ಥಿಗಳು ಧರ್ಮದ ಮಾರ್ಗವನ್ನು ಅನುಸರಿಸುತ್ತಾ ಸ್ಪರ್ಧಾತ್ಮಕ ಜಗತ್ತಿಗೆ ಸಜ್ಜಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಉಪಸ್ಥಿತರಿದ್ದು, ಎಕ್ಸಲೆಂಟ್ ವಿದ್ಯಾಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಸಂಪತ್‌ ಕುಮಾರ್‌ ಕಾರ್ಯಕ್ರಮವನ್ನು ಸಂಘಟಿಸಿ ನಿರೂಪಿಸಿದರು. ಪಾವನ ಪಂಚನ್ಮೋಕಾರ ಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ

Article Image

ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವ

ಉಳ್ಳಾಲ ಭಗವಾನ್ ಆದಿನಾಥ ಸ್ವಾಮಿ, ಭಗವಾನ್ ಪಾರ್ಶ್ವನಾಥ ಸ್ವಾಮಿ, ಮಾತೆ ಪದ್ಮಾವತೀ ದೇವಿ ಬಸದಿಯ ಪಂಚಕಲ್ಯಾಣ ಮಹೋತ್ಸವದ ವಾರ್ಷಿಕ ವರ್ಧಂತಿ ಪೂಜಾ ಮಹೋತ್ಸವವು ಮೂಡುಬಿದಿರೆ ಶ್ರೀ ಜೈನ ಮಠದ ಪ. ಪೂ. ಸ್ವಸ್ತಿಶೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದೊಂದಿಗೆ ದಿನಾಂಕ 23-03-2025ನೇ ಆದಿತ್ಯವಾರ ಜರಗಲಿದೆ. ಪೂಜಾ ಕಾರ್ಯಕ್ರಮ ಮೂಲಸ್ವಾಮಿಗೆ ೨೪ ಕಲಶ ಅಭಿಷೇಕ, ಮಾತೆ ಶ್ರೀ ಪದ್ಮಾವತಿ ದೇವಿಗೆ ಲಕ್ಷ ಹೂವಿನ ಮಹಾಪೂಜೆ, ಶ್ರೀ ಕ್ಷೇತ್ರಪಾಲನಿಗೆ ಕ್ಷೀರಾಭಿಷೇಕ, ಶ್ರೀ ನಾಗಬ್ರಹ್ಮ ಸಾನ್ನಿಧ್ಯ ಪೂಜಾ ಸೇವೆ.

ಪ್ರೋ. ಪದ್ಮಾಶೇಖರ್ ಅವರಿಗೆ ಸಿದ್ಧಾಂತಕೀರ್ತಿ ಪ್ರಶಸ್ತಿ

Article Image

ಪ್ರೋ. ಪದ್ಮಾಶೇಖರ್ ಅವರಿಗೆ ಸಿದ್ಧಾಂತಕೀರ್ತಿ ಪ್ರಶಸ್ತಿ

ಹೊಂಬುಜ ಜೈನ ಮಠದಿಂದ ನೀಡುವ 2025ನೇ ಸಾಲಿನ ಸಿದ್ಧಾಂತಕೀರ್ತಿ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ, ಪ್ರೋ. ಪದ್ಮಾಶೇಖರ್ ಅವರಿಗೆ ವಾರ್ಷಿಕ ಮಹಾರಥೋತ್ಸವ ಮುನ್ನಾ ದಿನವಾದ ಮಾ.21 ರಂದು ನಡೆಯುವ ಧಾರ್ಮಿಕ ಸಭೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ತಿಳಿಸಿದ್ದಾರೆ. ಈ ಪ್ರಶಸ್ತಿಯು 51 ಸಾವಿರ ರೂ. ನಗದು ಒಳಗೊಂಡಿದೆ. ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾ ಪರ ಹೋರಾಟಗಾರ್ತಿಯಾಗಿ ಪ್ರೊ. ಪದ್ಮಾ ಶೇಖರ್ ಬಹುಮುಖ ಸಾಧನೆ ಮಾಡಿದ್ದಾರೆ. ವಿಮರ್ಶೆ, ಸಂಶೋಧನೆ, ಕಾವ್ಯ, ಜೀವನಚರಿತ್ರೆ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದ್ದಾರೆ. ಪಿಎಚ್.ಡಿ ಸಂಶೋಧಕರಿಗೆ ಮಾರ್ಗದರ್ಶನ ಮಾಡಿದ್ದಾರೆ. ಇವರ ನೇತೃತ್ವದಲ್ಲಿ ಆರು ಸಾವಿರಕ್ಕೂ ಹೆಚ್ಚು ಪ್ರಾಚೀನ ತಾಳೆಪತ್ರಗಳನ್ನು ಡಿಜಟಲೀಕರಣ ಮಾಡಲಾಗಿದೆ. ಈಗಾಗಲೇ ಇವರಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ವಿಠಲಾನುಗ್ರಹ ಪ್ರಶಸ್ತಿ, ಚಾವುಂಡರಾಯ ಪ್ರಶಸ್ತಿ, ಆದರ್ಶ ಮಹಿಳಾ ರಾಷ್ಟ್ರೀಯ ಪುರಸ್ಕಾರ, ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿಗಳು ಲಭಿಸಿವೆ. ಪ್ರಸ್ತುತ ಇವರು ಮೈಸೂರಿನಲ್ಲಿ ನೆಲೆಸಿರುತ್ತಾರೆ.

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದ ವಾರ್ಷಿಕೋತ್ಸವ

Article Image

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದ ವಾರ್ಷಿಕೋತ್ಸವ

ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದಲ್ಲಿ ಪ.ಪೂ. ಸ್ವಸ್ತಿಶ್ರೀ ಸೌರಭಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಸಂಸ್ಥಾನ ಮಠ ತಿಜಾರ ರಾಜಸ್ಥಾನ ಇವರ ಪಾವನ ಸಾನ್ನಿಧ್ಯ ಹಾಗೂ ಮಾರ್ಗದರ್ಶನದೊಂದಿಗೆ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ವಿಜೃಂಭಣೆಯಿಂದ ವಾರ್ಷಿಕೋತ್ಸವ ಹಾಗೂ ಶಾಂತಿ ಚಕ್ರ ಆರಾಧನೆ, ಪದ್ಮಾವತಿ ಅಮ್ಮನವರ ಆರಾಭನೆ, ಲಕ್ಷ ಹೂವಿನ ಪೂಜೆ, ೨೪ ಕಲಶಾಭಿಷೇಕ, ಉತ್ಸವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಪ್ರತಿಷ್ಠಾ ಪುರೋಹಿತರಾದ ಜಯರಾಜ್ ಇಂದ್ರ ಮತ್ತು ಅರಹಂತ ಇಂದ್ರ ಹಾಗೂ ತಂಡದವರಿಂದ ಮಾ. 11ರಂದು ಜರುಗಿತು. ಈ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿದ ಆಡಳಿತ ಮಂಡಳಿ ಸದಸ್ಯರಾದ ಎಚ್. ವಿಜಯ ಕುಮಾರ್, ಮನೋರಮಾ, ವಿಮಲ, ಅಜಿತ್ ಕುಮಾರ್, ಶೋಭಾ, ಚಂದನಾ, ಸುಮಂತ್ ಜೈನ್ ಮುಂತಾದವರನ್ನು ಪೂಜ್ಯ ಸ್ವಾಮೀಜಿಯವರು ಅಭಿನಂದಿಸಿ, ಆಶೀವರ್ದಿಸಿದರು. ಪೂಜ್ಯ ಸ್ವಾಮೀಜಿಗಳವರು ಮಾತನಾಡುತ್ತಾ, ಶ್ರೀ ಕ್ಷೇತ್ರ ಚಂದ್ರಪುರವು ಅತೀ ಪ್ರಾಚೀನವಾದ ಕ್ಷೇತ್ರವಾಗಿದ್ದು, ಈ ಕ್ಷೇತ್ರವು ಅತಿಶಯವಾಗಿರುತ್ತದೆ. ಈ ಕ್ಷೇತ್ರ ದರ್ಶನ ಮಾಡಿದವರ ಪಾಪವು ನಾಶವಾಗಿ ಪುಣ್ಯ ಪ್ರಾಪ್ತಿಯಾಗುತ್ತದೆ. ಕ್ಷೇತ್ರದಲ್ಲಿ ನಿರಂತರವಾಗಿ ಆರಾಧನೆಗಳು, ಪೂಜೆಗಳು ನಡೆದು ಲೋಕ ಕಲ್ಯಾಣವಾಗಲಿ. ಈ ಕ್ಷೇತ್ರಕ್ಕೆ ಇನ್ನೊಮ್ಮೆ ಬೇಟಿ ನೀಡಿ ಈ ಕ್ಷೇತ್ರದಲ್ಲಿ ಎರಡು ದಿನ ಇದ್ದು ಧಾರ್ಮಿಕ ಕಾರ್ಯಕ್ರಮ ನಡೆಸುವುದಾಗಿ ಆಶೀರ್ವಚನ ನೀಡಿದರು. ಸಮಿತಿಯ ಸಂಚಾಲಕರಾದ ಡಾ.ಕೆ. ಜಯಕೀರ್ತಿ ಜೈನ್ ಕಾರ್ಯಕ್ರಮ ನಿರ್ವಹಿದರು. ಆಡಳಿತ ಮಂಡಳಿ ಪದಾಧಿಕಾರಿಗಳು, ಸದಸ್ಯರು ಮತ್ತು ರಾಣಿ ಕಾಳಲಾದೇವಿ ಮಹಿಳಾ ಮಂಡಲದ ಪದಾಧಿಕಾರಿಗಳು, ಸದಸ್ಯರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ

Article Image

24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ

ವೇಣೂರು ಭಗವಾನ್ ಶ್ರೀ ಬಾಹುಬಲಿ ಬೆಟ್ಟದ ಬಲ ಭಾಗದಲ್ಲಿರುವ ಬಿನ್ನಾಣಿ ಬಸದಿ ಭ| ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯ ಗಂಧಕುಟಿಗೆ, ಎಡ ಭಾಗದಲ್ಲಿರುವ ಅಕ್ಕಂಗಳ ಬಸದಿ ಭ| ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯ ಗಂಧಕುಟಿಗೆ ಪರಮಪೂಜ್ಯ ಮುನಿಶ್ರೀ ೧೦೮ ಶ್ರೀ ಆದಿತ್ಯ ಸಾಗರ ಮುನಿ ಮಹಾರಾಜರ ಮಾರ್ಗದರ್ಶನದಲ್ಲಿ ದಾನವಾಗಿ ನೀಡಿದ 24 ತೀರ್ಥಂಕರರ ರತ್ನದ ಜಿನಬಿಂಬಗಳಿಗೆ ಭ| ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವದ ಶುಭ ಸಂದರ್ಭದಲ್ಲಿ ನಾಳೆ (ಮಾ. 14) ಬೆಳಿಗ್ಗೆ 9.00 ಗಂಟೆಗೆ ಕ್ಷೀರ ಅಭಿಷೇಕ ಹಾಗೂ ಮಹಾಪೂಜೆ ನೆರವೇರಲಿರುವುದು.

ಶ್ರೀ ಕ್ಷೇತ್ರ ದೇವಗಿರಿ: ಮಾನಸ್ತಂಭೋಪರಿ ಚತುರ್ಮುಖ ಜಿನಬಿಂಬದ ಪ್ರತಿಷ್ಠಾ ಮಹೋತ್ಸವ

Article Image

ಶ್ರೀ ಕ್ಷೇತ್ರ ದೇವಗಿರಿ: ಮಾನಸ್ತಂಭೋಪರಿ ಚತುರ್ಮುಖ ಜಿನಬಿಂಬದ ಪ್ರತಿಷ್ಠಾ ಮಹೋತ್ಸವ

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಹೊರನಾಡು ಚಿಕ್ಕನಕೊಡಿಗೆ ದೇವಗಿರಿ ಕ್ಷೇತ್ರದ ಭಗವಾನ್ ಶ್ರೀ ೧೦೦೮ ಪಾರ್ಶ್ವನಾಥ ತೀರ್ಥಂಕರರ ಮತ್ತು ಚತುರ್ವಿಂಶತಿ ತೀರ್ಥಂಕರರ ಭವ್ಯ ಸಮವಸರಣದ ಮುಂಭಾಗದಲ್ಲಿ ನೂತನ ಮಾನಸ್ತಂಭೋಪರಿ ಚತುರ್ಮುಖ ಜಿನಬಿಂಬದ ಪ್ರತಿಷ್ಠಾ ಮಹೋತ್ಸವವು ಕಾರ್ಕಳ ಶ್ರೀ ಜೈನಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಂಗಳ ಆಶೀರ್ವಾದ ಮತ್ತು ದಿವ್ಯ ನೇತೃತ್ವದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ದಿನಾಂಕ : 15-3-2025ನೇ ಶನಿವಾರದಿಂದ ಮೊದಲ್ಗೊಂಡು ದಿನಾಂಕ : 17-03-2025ನೇ ಸೋಮವಾರದ ಪರ್ಯಂತ ಆಗಮೋಕ್ತ ವಿಧಿ-ವಿಧಾನಗಳೊಂದಿಗೆ ಪ್ರತಿಷ್ಠಾಪನಾ ಪೂರ್ವಕವಾಗಿ ಜರುಗಲಿದೆ. ಧಾರ್ಮಿಕ ವಿಧಿ-ವಿಧಾನಗಳು: ದಿನಾಂಕ : 15-03-2025ನೇ ಶನಿವಾರ ಬೆಳಿಗ್ಗೆ ಗಂಟೆ 7-45ರಿಂದ ನಿತ್ಯವಿಧಿ ಸಹಿತ ಇಂದ್ರ ಪ್ರತಿಷ್ಠೆ, ಬೆಳಿಗ್ಗೆ 8-55ರ ಮೇಷ ಲಗ್ನ ಸುಮುಹೂರ್ತದಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ ವಿಧಾನ, ದಿವಾಗಂಟೆ 11-45ರ ವೃಷಭ ಲಗ್ನದಲ್ಲಿ ಮುಖವಸ್ತ್ರ ಉದ್ಘಾಟನೆ, ಅಪರಾಹ್ನ ಗಂಟೆ 2-00ರಿಂದ ನಾಂದಿಮಂಗಲ ವಿಧಾನ, ವಾಸ್ತುಪೂಜಾ ವಿಧಾನ, ನವಗ್ರಹ ಮಹಾಶಾಂತಿ ವಿಧಾನ, ದಿಕ್ಪಾಲಕ ಬಲಿ, ಸಂಜೆ ಗಂಟೆ 4-15ರ ಕರ್ಕಾಟಕ ಲಗ್ನದಲ್ಲಿ ಶ್ರೀ ಕ್ಷೇತ್ರಪಾಲ ಸ್ವಾಮಿ ಪ್ರತಿಷ್ಠೆ, ಸಂಜೆ ಗಂಟೆ 5-25ರ ಸಿಂಹಲಗ್ನದಲ್ಲಿ ನಾಗಾರಾಧನಾ ಪೂರ್ವಕ ನಾಗಪ್ರತಿಷ್ಠೆ, ನವಕಲಶ ಅಭಿಷೇಕ, ಮಹಾಮಂಗಳಾರತಿ. ಸಾಂಸ್ಕೃತಿಕ ಕಾರ್ಯಕ್ರಮಗಳು: ಸಂಜೆ ಗಂಟೆ 7-00ರಿಂದ ಮಲೆನಾಡು ಪ್ರಾಂತ್ಯದ ಆಯ್ದ ಜಿನಭಜನಾ ತಂಡಗಳಿಂದ “ಜಿನಗಾನ ಪ್ರಸ್ತುತಿ” ದಿನಾಂಕ : 16-03-2025ನೇ ಭಾನುವಾರ ಬೆಳಿಗ್ಗೆ ನಿತ್ಯವಿಧಿ ಸಹಿತ ಗಂಟೆ 8-30ರಿಂದ ೮೧ ಕಲಶಗಳಿಂದ ಮಾನಸ್ತಂಭ ನವಪದ ಶುದ್ಧಿ ವಿಧಾನ, ಮಾನಸ್ತಂಭದ ಆವರಣದಲ್ಲಿ ವಾಸ್ತುಪೂಜಾ ವಿಧಾನ, ನವಗ್ರಹ ಮಹಾಶಾಂತಿ ವಿಧಾನ, ದಿಕ್ಪಾಲಕ ಬಲಿ, ಬೆಳಿಗ್ಗೆ ಗಂಟೆ 9-00ರಿಂದ ಸಾಮೂಹಿಕ ವೃತೋಪದೇಶ, ಬೆಳಿಗ್ಗೆ ಗಂಟೆ 10-00ರಿಂದ ವೃಷಭಾದಿ ಚತುರ್ವಿಂಶತಿ ತೀರ್ಥಂಕರರಿಗೆ ಮಹಾಭಿಷೇಕ, ಮಧ್ಯಾಹ್ನ ಗಂಟೆ 2-00ರಿಂದ ಚತುರ್ವಿಂಶತಿ ತೀರ್ಥಂಕರರ ಆರಾಧನೆ. ಸಂಜೆ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಗೆ 24 ಕಲಶ ಅಭಿಷೇಕ, ಮಹಾಮಂಗಳಾರತಿ. ಸಾಂಸ್ಕೃತಿಕ ಕಾರ್ಯಕ್ರಮಗಳು: ಸಂಜೆ ಗಂಟೆ 6-00ರಿಂದ ಸುದೇಶ್ ಜೈನ್ ಮತ್ತು ಬಳಗ, ಮಕ್ಕಿಮನೆ ಕಲಾವೃಂದ, ಮಂಗಳೂರು ಇವರ ಸಂಯೋಜನೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ವೈಭವ - ಪ್ರಸಿದ್ಧ ಜಿನಭಜನಾ ತಂಡಗಳಿಂದ ಜಿನಗಾನ ಪ್ರಸ್ತುತಿ ದಿನಾಂಕ : 17-03-2025ನೇ ಸೋಮವಾರ ನಿತ್ಯವಿಧಿಯೊಂದಿಗೆ ಗಂಧಯಂತ್ರಾರಾಧನಾ ಸಹಿತ ದಿವಾಗಂಟೆ 10-25ರಿಂದ 10-35ರ ಸುಮುಹೂರ್ತದಲ್ಲಿ ಚತುರ್ಮುಖ ಜಿನಬಿಂಬ ಶುದ್ದಿ, ಮಂತ್ರನ್ಯಾಸಪೂರ್ವಕ ನಯನೋನ್ಮಿಲನ, ದಿವಾಗಂಟೆ 11-15ರಿಂದ 11-45ರ ವೃಷಭ ಲಗ್ನ ಸುಮುಹೂರ್ತದಲ್ಲಿ ಮಾನಸ್ತಂಭೋಪರಿ ಶ್ರೀ ಜಿನಬಿಂಬ ಪ್ರತಿಷ್ಠಾಪನೆ, ಅಭಿಷೇಕ, ಮಧ್ಯಾಹ್ನ 12-25ರ ಅಭಿಜಿನ್ ಮುಹೂರ್ತದಲ್ಲಿ ಶ್ರೀ ಪದ್ಮಾವತಿ ದೇವಿ ಆರಾಧನಾಪೂರ್ವಕ ಪ್ರತಿಷ್ಠೆ, ಮಧ್ಯಾಹ್ನ ಗಂಟೆ 2-00ರಿಂದ ಮಾನಸ್ತಂಭೋಪರಿ ಜಿನಬಿಂಬಗಳಿಗೆ ೧೦೮ ಕಲಶಗಳ ಮಹಾಭಿಷೇಕ, ಸಮವಸರಣದಲ್ಲಿ ಕಲಿಕುಂಡ ಯಂತ್ರಾರಾಧನೆ, ೨೪ ಕಲಶಗಳ ಅಭಿಷೇಕ, ರಾತ್ರಿ 7-30ರಿಂದ ಸರ್ವಾಷ್ಣಯಕ್ಷ ಉತ್ಸವ, ಗುರುಗಳ ಪಾದಪೂಜೆ, ಕಂಕಣ ವಿಸರ್ಜನೆ, ತೋರಣ ವಿಸರ್ಜನೆ. ಧಾರ್ಮಿಕ ಸಭಾ ಕಾರ್ಯಕ್ರಮ: ಸಂಜೆ 6-00ರಿಂದ ಪೂಜ್ಯ ಭಟ್ಟಾರಕ ಶ್ರೀಗಳಿಂದ ಮಂಗಲ ಪ್ರವಚನ, ಸನ್ಮಾನ ಸಮಾರಂಭ.

ವಾರ್ಷಿಕ ರಥಯಾತ್ರ ಮಹೋತ್ಸವದ ಇಂದಿನ ಕಾರ್ಯಕ್ರಮ

Article Image

ವಾರ್ಷಿಕ ರಥಯಾತ್ರ ಮಹೋತ್ಸವದ ಇಂದಿನ ಕಾರ್ಯಕ್ರಮ

ವೇಣೂರು: ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರ ಮಹೋತ್ಸವವು ದಿನಾಂಕ 14.03.2025ನೇ ಶುಕ್ರವಾರ ಜರುಗಲಿರುವುದು. ಅದರ ಪೂರ್ವಭಾವಿಯಾಗಿ ಇಂದು ಬೆಳಿಗ್ಗೆ ಗಂಟೆ 10:00ಕ್ಕೆ ಬೆಟ್ಟದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ಶಾಂತಿಚಕ್ರ ಆರಾಧನೆ ನೆರವೇರಲಿದೆ. ಇಂದು ಸಾಯಂಕಾಲ ಗಂಟೆ 6:30 ರಿಂದ ರಥಯಾತ್ರ ಮಹೋತ್ಸವದ ಪ್ರಯುಕ್ತ ಶ್ರೀ ರಕ್ಷಾ ಯಂತ್ರಾರಾಧನೆ, ಶ್ರೀ ಬಲಿಪೂಜೆ, ವಸಂತಕಟ್ಟೆ ಪೂಜೆ, ಶ್ರೀ ವಿಹಾರ, ಶ್ರೀ ದೇವರ ಉತ್ಸವ ಹಾಗೂ ಶ್ರೀ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ ಜರಗಲಿರುವುದು.

ಶಿಶಿಲ ವಾರ್ಷಿಕೋತ್ಸವ

Article Image

ಶಿಶಿಲ ವಾರ್ಷಿಕೋತ್ಸವ

ಬೆಳ್ತಂಗಡಿ: ತಾಲೂಕಿನ, ಶಿಶಿಲ, ಶ್ರೀ ಕ್ಷೇತ್ರ ಚಂದ್ರಪುರದಲ್ಲಿರುವ ಭ| ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕೋತ್ಸವವು ಕಾರ್ಕಳ ಶ್ರೀ ಜೈನ ಮಠದ ಪ.ಪೂ. ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಮಾ. 11ರಂದು ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಪೂಜಾ ಕಾರ್ಯಕ್ರಮಗಳು: ತಾ. 11-03-2025ನೇ ಮಂಗಳವಾರ ಬೆಳಿಗ್ಗೆ 7.45ರ ಶುಭ ಲಗ್ನದಲ್ಲಿ ತೋರಣ ಮುಹೂರ್ತ ನಂತರ ವಿಮಾನ ಶುದ್ಧಿ ಪ್ರಾರಂಭ, ಬೆಳಿಗ್ಗೆ 9.19ರ ಶುಭ ಲಗ್ನದಲ್ಲಿ ಮುಖವಸ್ತ್ರ ಉದ್ಘಾಟನೆ, ಬೆಳಿಗ್ಗೆ 9.30ರಿಂದ ಶಾಂತಿ ಚಕ್ರ ಆರಾಧನೆ ಮತ್ತು ಪದ್ಮಾವತಿ ಆರಾಧನೆ, ಮಧ್ಯಾಹ್ನ 12ರಿಂದ 24 ಕಲಶ ಅಭಿಷೇಕ ಮಹೋತ್ಸವ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪಾದಪೂಜೆ, ಶ್ರೀ ಜಿನಗಂಧೋದಕ ವಿತರಣೆ. ವಿ.ಸೂ.: ಪೂಜ್ಯ ಸ್ವಾಮೀಜಿಯವರಿಂದ ಶ್ರೀಕ್ಷೇತ್ರ ಚಂದ್ರಪುರ-ಶಿಶಿಲದ ಸ್ಥಳ ಪರಿಚಯ ಪುಸ್ತಕ ಬಿಡುಗಡೆ

ವಿಶೇಷ ಚೇತನ (PHYSICALLY HANDICAP) ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Article Image

ವಿಶೇಷ ಚೇತನ (PHYSICALLY HANDICAP) ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ದಿಗಂಬರ ಜೈನ ಪಂಗಡಕ್ಕೆ ಸೇರಿದ್ದು ಪ್ರಸ್ತುತ 9ನೇ ತರಗತಿಯಿಂದ ಉತ್ತೀರ್ಣರಾಗಿ SSLCಗೆ ಬರುವ ಮತ್ತು ಮೊದಲನೇ ವರ್ಷದ PUC ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎರಡನೇ PUCಗೆ ಬರುವ ಅರ್ಹ ವಿಶೇಷ ಚೇತನ (PHYSICALLY HANDICAP) ಮಕ್ಕಳಿಗೆ ತುಮಕೂರಿನ ದಿ| ಎನ್.ಸಿ. ಬೊಮ್ಮಣ್ಣಯ್ಯ ಗುಬ್ಬಿ ರವರ ಹೆಸರಿನಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು, ಆಸಕ್ತ ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ದಿನಾಂಕ 30-04-2025ರ ಒಳಗೆ ಅರ್ಜಿ ಸಲ್ಲಿಸಬಹುದು ಬಂದ ಅರ್ಜಿಗಳನ್ನು ಪರಿಶೀಲಿಸಿ ಅರ್ಹರಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಸಲ್ಲಿಸಬೇಕಾದ ದಾಖಲಾತಿಗಳು 1) ತಂದೆ/ತಾಯಿ/ಪೋಷಕರ ವಿವರ 2) ವಾರ್ಷಿಕ ವರಮಾನದ ದೃಢೀಕೃತ ಪ್ರತಿ 3) ಅಧಿಕೃತ ವೈದ್ಯರಿಂದ Disability ಬಗ್ಗೆ ಪಡೆದ ಪ್ರಮಾಣ ಪತ್ರ 4) ಆಧಾರ್ ಕಾರ್ಡ್ ಮತ್ತು ಮೊಬೈಲ್ ನಂಬರ್ 5) ಅಂಕ ಪಟ್ಟಿ ಅರ್ಜಿಸಲ್ಲಿಸಬೇಕಾದ ವಿಳಾಸ ಎನ್. ಬಿ. ಶ್ರೇಯಾಂಸ ಕುಮಾ‌ರ್ “ರಾಜಗೃಹ” ಸಾಧನ ರಸ್ತೆ, ಕೆ.ಆರ್. ಬಡಾವಣೆ, ತುಮಕೂರು-572101 ಮೊ: 9901311970.

ಅನಿತಾ ಸುರೇಂದ್ರ ಕುಮಾರ್‌ರವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ 2025

Article Image

ಅನಿತಾ ಸುರೇಂದ್ರ ಕುಮಾರ್‌ರವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ 2025

ಸಮಾಜ ಸೇವಕಿ, ಮುನಿಗಳ ಚಾತುರ್ಮಾಸದ ರುವಾರಿ, ಪ್ರತಿಯೊಂದು ಮನೆ ಮನೆಯಲ್ಲಿ ಜಿನಭಜನೆಯ ಮುಖಾಂತರ ಮನೆ ಮಾತಾಗಿರುವ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್‌ರವರಿಗೆ ಬೆಂಗಳೂರಿನ ರಾಣಿ ಅಬ್ಬಕ್ಕ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ "ವೀರರಾಣಿ ಅಬ್ಬಕ್ಕ ಪ್ರಶಸ್ತಿ"ಯನ್ನು ಮಹಾಲಕ್ಷ್ಮೀ ಲೇಔಟ್‌ನಲ್ಲಿ ಭಾನುವಾರ ಆಯೋಜಿಸಿದ್ದ ರಾಣಿ ಅಬ್ಬಕ್ಕ ಉತ್ಸವ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಯಿತು.

ಕಂಬದಹಳ್ಳಿಯಲ್ಲಿ ಜಿನರಾತ್ರಿ ನಿಮಿತ್ತ ಅಖಂಡ ಣಮೋಕಾರ ಮಂತ್ರ ಪಠಣ

Article Image

ಕಂಬದಹಳ್ಳಿಯಲ್ಲಿ ಜಿನರಾತ್ರಿ ನಿಮಿತ್ತ ಅಖಂಡ ಣಮೋಕಾರ ಮಂತ್ರ ಪಠಣ

ಕಂಬದಹಳ್ಳಿ: ಭ| ಶ್ರೀ ಆದಿನಾಥ ತೀರ್ಥಂಕರರ ಮೋಕ್ಷ ಕಲ್ಯಾಣ ನಿಮಿತ್ತ ಜಿನರಾತ್ರಿಯಂದು ಕಂಬದಹಳ್ಳಿಯಲ್ಲಿ ಪ. ಪೂ. ಸ್ವಸ್ತಿಶ್ರೀ ಭಾನುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರ ಪಾವನ ಸಾನ್ನಿಧ್ಯದಲ್ಲಿ ಇಪ್ಪತ್ತ ನಾಲ್ಕು ಗಂಟೆಗಳ ಕಾಲ ಅಖಂಡ ಣಮೋಕಾರ ಮಂತ್ರ ಪಠಣ ಜರಗಿತು.

ವೇಣೂರು: ವಾರ್ಷಿಕ ರಥಯಾತ್ರಾ ಮಹೋತ್ಸವ

Article Image

ವೇಣೂರು: ವಾರ್ಷಿಕ ರಥಯಾತ್ರಾ ಮಹೋತ್ಸವ

ವೇಣೂರು: ದಿನಾಂಕ 14.03.2025ನೇ ಶುಕ್ರವಾರ ಶ್ರೀ ಬಾಹುಬಲಿ ಬೆಟ್ಟದ ವಾರ್ಷಿಕ ರಥಯಾತ್ರಾ ಮಹೋತ್ಸವವು ಜರಗಲಿರುವುದು ಅದರ ಪೂರ್ವಭಾವಿಯಾಗಿ ದಿನಾಂಕ 11.03.2025ನೇ ಮಂಗಳವಾರ (ಇಂದು) ಸಾಯಂಕಾಲ ಗಂಟೆ 6.00ಕ್ಕೆ ತೋರಣ ಮುಹೂರ್ತ, ವಿಮಾನ ಶುದ್ಧಿ, ದ್ವಜಾರೋಹಣ, ಪಾದಾಭಿಷೇಕ ಜರಗಲಿರುವುದು. ವಿ.ಸೂ.: ದಿನಾಂಕ 13.03.2025ನೇ ಗುರುವಾರ ರಾತ್ರಿ ಗಂಟೆ 7.00ರಿಂದ ಶ್ರೀ ದೇವರ ಶ್ರೀ ವಿಹಾರ ನೆರವೇರಲಿದೆ.

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಕಬಡ್ಡಿ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಕಬಡ್ಡಿ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಪರಮ ಪೂಜ್ಯ ರಾಜರ್ಷಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದು. “ರಾಜರ್ಷಿ ಚಿನ್ನದ ಹೆಜ್ಜೆ” ಎಂಬ ಶೀರ್ಷಿಕೆಯಲ್ಲಿ ಪರ್ಯಾಯ ಫಲಕವನ್ನು ನೀಡುತಿದ್ದೇವೆ. ಏ. 06ರಂದು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ಕ್ರೀಡಾ ನಿಯಮಗಳು ಮತ್ತು ಸೂಚನೆ: * ತಂಡದಲ್ಲಿ 7 + 3 ಆಟಗಾರರಿಗೆ ಅವಕಾಶವಿದ್ದು ಕೊನೆಯ ಸಮಯದಲ್ಲಿ ಆಟಗಾರರ ಬದಲಾವಣೆಗೆ ಯಾವುದೇ ಅವಕಾಶ ಇರುವುದಿಲ್ಲ. * ಪಂದ್ಯಗಳನ್ನು ಅಗ್ ಮಾದರಿಯಲ್ಲಿ ಪಂದ್ಯಗಳನ್ನು ಮತ್ತು ಸುಸಜ್ಜಿತ ಮ್ಯಾಟ್ ಗಳಲ್ಲಿ ಅಡಿಸಲಾಗುವುದು. * ಪಂದ್ಯಗಳ ವಿಜೇತರಿಗೆ ಪ್ರಥಮ, ದ್ವಿತೀಯ, ತ್ರಿತೀಯ ಮತ್ತು ಚತುರ್ಥ ಬಹುಮಾನ ಮತ್ತು ಆಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. * ಉತ್ತಮ ರೈಡರ್, ಡಿಫೆಂಡರ್ ಮತ್ತು ಅಲೌಂಡರ್ ಗಳಿಗೆ ಅಕರ್ಷಕ ಟ್ರೋಫಿಗಳನ್ನು ನೀಡಲಾಗುವುದು. * ಒಂದು ತಂಡದಲ್ಲಿ ಆಡಿದ ಆಟಗಾರರು ಬೇರೆ ತಂಡದಲ್ಲಿ ಅಡುವಂತಿಲ್ಲ. * ಅಸಭ್ಯವಾಗಿ ವರ್ತಿಸಿದ ತಂಡವನ್ನು ಪಂದ್ಯಾವಳಿಯಿಂದ ಹೊರಗಿಡಲಾಗುವುದು * ನಿರ್ಣಾಯಕರು ಹಾಗೂ ಆಯೋಜಕರ ತೀರ್ಮಾನವೇ ಅಂತಿಮ. * ತಂಡಗಳ ಸೇರ್ಪಡೆ ನಿಗದಿತ ದಿನಾಂಕ 30-03-2025 ರ ಒಳಗೆ ನೋಂದಾಯಿಸಿಕೊಳ್ಳಬೇಕು. * ತಂಡಗಳಿಗೆ ಪ್ರವೇಶ ಶುಲ್ಕ ತಲಾ 2000/- ರೂಗಳು ಆಗಿರುತ್ತದೆ. ಸ್ಥಳ : ಪೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು ಸಂಯೋಜಕರು: ಮಹಾವೀರ್ ಬಿ ಜೆ ಜೈನ್, ದಿಲೀಪ್ ಜೈನ್, ರೋಹಿತ್‌ ಜೈನ್, ಅಭಿನಂದನ್ ಜೈನ್ ಬಿದರೂರು, ಸುಧೀರ್ ಜೈನ್ ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 9611403305, 9483691093

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಥ್ರೋ ಬಾಲ್‌ ಪಂದ್ಯಾಟ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಥ್ರೋ ಬಾಲ್‌ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ತಂಡದ ದಾಖಲಾತಿ ಮತ್ತು ಕ್ರೀಡಾ ನಿಯಮಗಳು * ಪ್ರತಿ ತಂಡದಲ್ಲಿ ಏಳು ಜನ ಆಟಗಾರರನ್ನು ಮತ್ತು ಮೂರು ಜನ ಬದಅ ಆಟಗಾರರನ್ನು ಹೊಂದಿರಬೇಕು. * ತಂಡವನ್ನು ದಿನಾಂಕ 30 ಮಾರ್ಚ್ 2025 ರ ಒಳಗೆ ನೋಂದಣಿ ಮಾಡಿಕೊಳ್ಳಬೇಕು. * ಒಂದು ತಂಡಕ್ಕೆ ಪ್ರವೇಶ ಶುಲ್ಕ 1000/- ರೂ ಅಗಿರುತ್ತದೆ. * ಒಬ್ಬ ಆಟಗಾರರಿಗೆ ಒಂದು ತಂಡದಲ್ಲಿ ಮಾತ್ರ ಅಡಲು ಅವಕಾಶವಿರುತ್ತದೆ. * ವಿಜೇತ ತಂಡಗಳಿಗೆ ವಿಶೇಷ ಆಕರ್ಷಕ ಟ್ರೋಫಿ ಹಾಗೂ ನಗದು ಬಹುಮಾನ ಏರುತ್ತದೆ. * ನಿರ್ಣಾಯಕರ ಮತ್ತು ಆಯೋಜಕರ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ. ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಅರ್ಹನ್ ಜೈನ್, ತನುಜ ಜೈನ್, ಕವಿತ ಮಂಜಯ್ಯ ಜೈನ್, ವೃಷಭ್ ಜೈನ್ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9481252358, 9036109108

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಆಶು ಭಾಷಣ ಸ್ಪರ್ಧೆ

Article Image

ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಆಶು ಭಾಷಣ ಸ್ಪರ್ಧೆ

ಬೆಂಗಳೂರಿನ ಸುಹಾಸ್ತಿ ಜೈನ್‌ ಮಿಲನ್‌ನ ಪ್ರತಿಷ್ಠಿತ ಹೆಮ್ಮೆಯ ಕಾರ್ಯಕ್ರಮ ಜಿನಸಮ್ಮಿಲನ-2025 ಸೀಸನ್-09‌ ಪ್ರತಿವರ್ಷದಂತೆ ಈ ವರ್ಷವೂ ಹಲವು ಕ್ರೀಡೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮಕ್ಕೆ ನೋಂದಾಯಿಸಿಕೊಳ್ಳಲು ಲಿಂಕ್: https://forms.gle/SkmFayT6oLUS1iso6 ಏ. 06ರಂದು ಬೆಂಗಳೂರು : ಜಿನಸಮ್ಮಿಲನ ಸೀಸನ್‌ -09 ಆಶು ಭಾಷಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಸ್ಪರ್ಧೆಯ ಸಾಮಾನ್ಯ ನಿಯಮಗಳು: * ಕನಿಷ್ಠ ನಿಮಿಷ ಹಾಗೂ ಗರಿಷ್ಠ 5 ನಿಮಿಷಗಳ ಸಮಯಾವಕಾಶ ನೀಡಲಾಗುವುದು. * 4 ನಿಮಿಷವಾದಾಗ ಒಂದು ಎಚ್ಚರಿಕೆಯ ಬೆಲ್ ನೀಡಲಾಗುವುದು. * ಭಾಷಣವು ಕನ್ನಡದಲ್ಲಿ ಮಾತ್ರ ಇರಬೇಕು * ಸ್ಪರ್ಧೆಯಲ್ಲಿ ಭಾಗವಹಿಸುವವರು ನೊಂದಾಯಿಸಲು ಕೊನೆಯ ದಿನಾಂಕ: 30-03-2025 ಸ್ಥಳ : ಸೇರೆಂಟ್ಸ್ ಅಸೋಸಿಯೇಷನ್ ಕಾಲೇಜು ರಾಜಾಜನಗರ, ಬೆಂಗಳೂರು, ಸಂಯೋಜಕರು: ಮಂಜಯ್ಯ ಜೈನ್ ಮಳ್ಳೋಡಿ, ಪುಟ್ಟಸ್ವಾಮಿ ಜೈನ್, ಉದಂಕ ಜೈನ್, ಸಂತೋಷ ಬಿ.ವಿ ಹೆಚ್ಚಿನ ಮಾಹಿತಿಗಳಿಗಾಗಿ ಸಂಪರ್ಕಿಸಿ: 9611555108, 9480565905

ಹೂವಿನ ಹಡಗಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ

Article Image

ಹೂವಿನ ಹಡಗಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂಪನ್ನ

ವಿಜಯನಗರ ಜಿಲ್ಲೆ, ಹೂವಿನ ಹಡಗಲಿ ಪಟ್ಟಣದ ಪಾರ್ಶ್ವನಾಥ ಜಿನ ಮಂದಿರದ ಶ್ರೀ ಪಾರ್ಶ್ವನಾಥ ಸಭಾ ಮಂಟಪದಲ್ಲಿ ಶ್ರೀ ಜ್ವಾಲಾಮಾಲಿನಿ ಮಹಿಳಾ ಸಮಾಜ ಹಾಗೂ ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಸಹಭಾಗಿತ್ವದಲ್ಲಿ ಮಾ. 08ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದೀಪ ಪ್ರಜ್ವಲನಿಯ ಮೂಲಕ ಉದ್ಘಾಟಿಸಲಾಯಿತು. ಶ್ರೀ ಜ್ವಾಲಾಮಾಲಿನಿ ಮಹಿಳಾ ಸಮಾಜದ ಅಧ್ಯಕ್ಷರಾದ ಎಂ.ಡಿ. ಪದ್ಮಾವತಿ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಮಹಿಳಾ ಸಾಧಕೀಯರಾದ ಮಹಾವೀರ ಅಲ್ಪಸಂಖ್ಯಾತರ ಪತಿನ ಸಹಕಾರ ಸಂಘದ ಪುಷ್ಪವತಿ ಪಾರ್ಶ್ವನಾಥ ರೇವಡಿ, ಶಿಲ್ಪ ಸಂತೋಷ ಸೂಗುರು, ನಾಗ ಮಂಜುಳಾ ಜೈನ್‌ರನ್ನು ಸನ್ಮಾನಿಸಲಾಯಿತು. ಚಂಪರಾಯಪ್ಪ ಹೊಳಲು ಸ್ವಾಗತಿಸಿದರು. ಅನುಷಾ ಮಯೂರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಮೇಘ ಭಾಗೇಶ್ ಜೈನರ್ ವಂದಿಸಿದರು.

First Previous

Showing 11 of 23 pages

Next Last