Article Image

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

Article Image

ಜೈನ ಬಸದಿಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರುಗಳಿಗೆ ಮಾಸಿಕ ಗೌರವ ಧನ ನೀಡಲು ಅನುದಾನ ಬಿಡುಗಡೆ

ಬೆಳ್ತಂಗಡಿ: ಜೈನ ಬಸದಿಗಳ ಮುಖ್ಯ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ಅವರ ದೈನಂದಿನ ಜೀವನ ನಿರ್ವಹಣೆಗೆ ಅನುಕೂಲ ಆಗುವಂತೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅನುದಾನವನ್ನು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಬಿಡುಗಡೆಗೊಳಿಸಿರುತ್ತಾರೆ. ಈ ಯೋಜನೆ ಪ್ರಥಮ ಬಾರಿಗೆ ಜಾರಿಯಾಗುತ್ತಿರುವುದು ನಮಗೆಲ್ಲ ಸಂತೋಷವನ್ನುಂಟು ಮಾಡಿದೆ. ಯೋಜನೆಯನ್ನು ಜಾರಿ ಮಾಡಿದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ರವರಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಝಮೀರ್ ರವರಿಗೆ ಹಾಗೂ ಈ ಯೋಜನೆಯನ್ನು ಜಾರಿಗೊಳಿಸುವಲ್ಲಿ ಶ್ರಮವಹಿಸಿದ ನಮ್ಮ ಸಮಾಜದ ಎಚ್. ನಾಭಿರಾಜ ಜೈನ್ ಹಾಗೂ ಕರ್ನಾಟಕ ಸರಕಾರಕ್ಕೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧00೮ ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ಆಡಳಿತ ಮಂಡಳಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಂಚಾಲಕರಾದ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಸತ್ತೂರು, ಧಾರವಾಡ, ಸೆ.24: ಅಲೈಡ್ ಸೈನ್ಸಸ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Article Image

ಸತ್ತೂರು, ಧಾರವಾಡ, ಸೆ.24: ಅಲೈಡ್ ಸೈನ್ಸಸ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

ಎಸ್.ಡಿ.ಎಂ. ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ, ಅಲೈಡ್ ಹೆಲ್ತ್ ಸೈನ್ಸಸ್ ಘಟಕವು ಸೆಪ್ಟೆಂಬರ್ 24, 2025 ರಂದು 7ನೇ ಬ್ಯಾಚ್ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಖ್ಯಾತ ಸಮಾಜ ಸೇವಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷರು ಮತ್ತು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷರಾದ ರಾಜಣ್ಣ ಕೊರವಿ ಅವರು ಮುಖ್ಯ ಅತಿಥಿಗಳಾಗಿದ್ದರು. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಡಾ. ನಿರಂಜನ್ ಕುಮಾರ್ ಅವರು ಗೌರವ ಅತಿಥಿಗಳಾಗಿದ್ದು ದೀಪ ಬೆಳಗಿಸುವ ಮೂಲಕ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾದ ರಾಜಣ್ಣ ಕೊರವಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ: ಆರೋಗ್ಯ ವೃತ್ತಿಪರರು ಧೈರ್ಯ ಮತ್ತು ಸಹಾನುಭೂತಿಯಿಂದ ರೋಗಿಗಳ ಸೇವೆ ಮಾಡಬೇಕು. ಎಸ್.ಡಿ.ಎಂ ಸಂಸ್ಥೆಗಳು ಶ್ರೇಷ್ಠತೆಯೊಂದಿಗೆ ಮಾನವೀಯ ಸೇವೆಗಳಿಗೆ ಹೆಸರುವಾಸಿಯಾಗಿವೆ. ಹೊಸ ಹೊಸ ತಂತ್ರಜ್ಞಾನದ ಬಳಕೆಯೊಂದಿಗೆ ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆಯನ್ನು ನೀಡಬೇಕು. ಸಮಯಪಾಲನೆ, ಶಿಸ್ತು ಮತ್ತು ಒಗಟ್ಟಿಗೆ ಆರೋಗ್ಯ ವೃತ್ತಿಪರರು ಆದ್ಯತೆ ನೀಡಬೇಕು. ಮಾನವೀಯತೆಯಿಂದ ರೋಗಿಗಳ ಸೇವೆ ಮಾಡುವುದರೊಂಗೆ ಉತ್ತಮ ಸಂವಹನವನ್ನು ಹೊಂದಬೇಕು. ಪ್ರತಿದಿನ ನಾವು ದೊಡ್ಡ ಕನಸುಗಳನ್ನು ಕಾಣತ್ತಾ, ಅದನ್ನು ಸಾಧಿಸುವ ಗುರಿ ಹೊಂದಬೇಕು. ಎಸ್.ಡಿ.ಎಂ.ನ ಅತ್ಯುತ್ತಮ ಸೌಲಭ್ಯ ಮತ್ತು ನಿಮಗೆ ಲಭ್ಯವಿರುವ ವಿಫುಲ ಅವಕಾಶವನ್ನು ಬಳಸಿಕೊಳ್ಳಬೇಕು. ಎಸ್.ಡಿ.ಎಂ. ಸಂಸ್ಥೆಗಳು ಸದೃಢ ಕಟ್ಟಡಗಳನ್ನು ನಿರ್ಮಿಸುವುದಲ್ಲದೆ ಜ್ಞಾನದ ಬದ್ರಬುನಾದಿಯನ್ನು ಸಹ ನಿರ್ಮಿಸುತ್ತದೆ. ಎಸ್.ಡಿ.ಎಂ. ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕಿಯವರಾದ ಪದ್ಮಲತಾ ನಿರಂಜನ್, ಸಹ ಉಪ ಕುಲಪತಿಗಳಾದ ವಿ. ಜೀವಂಧರ್ ಕುಮಾರ್ ಮತ್ತು ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ವಿಶ್ವವಿದ್ಯಾಲಯದ ಇತರ ಅಧಿಕಾರಿಗಳು, ಅಂಗ ಸಂಸ್ಥೆಗಳ ಮುಖ್ಯಸ್ಥರು, ಅಧ್ಯಾಪಕರು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಹೊಸ ವಿದ್ಯಾರ್ಥಿಗಳಿಗೆ ಬಿಳಿ ಕೋಟುಗಳನ್ನು ವಿತರಿಸಲಾಯಿತು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ್ ಕೆ. ಕುಲಕರ್ಣಿ, ಕಾಲೇಜಿನ ವೈಶಿಷ್ಟ್ಯದ ಬಗ್ಗೆ ಪರಿಚಯ ಮಾಡಿಕೊಟ್ಟರು. ನೇಫ್ರಾಲಜಿ ವಿಭಾಗದ ಪ್ರಾಧ್ಯಾಪಕರಾದ ಡಾ. ನಾಗರಾಜ್ ನಾಯಕ್, ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಉಪ ಕುಲಸಚಿವರಾದ ಡಾ. ಅಜಂತಾ ಜಿಎಸ್, ವಿಶ್ವವಿದ್ಯಾಲಯದ ತತ್ವಗಳು ಮತ್ತು ನೀತಿಗಳ ಬಗ್ಗೆ ವಿವರಿಸಿದರು. ಅಂಗ ರಚನಾಶಾಸ್ತ್ರ ವಿಭಾಗದ ಅಧ್ಯಾಪಕಿ ಡಾ. ರೋಶನಿ ಸದಾಶಿವ, ಕಾರ್ಯಕ್ರಮವನ್ನು ನಿರೂಪಿಸಿದರು. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರು ಮತ್ತು ಅಲೈಡ್ ಹೆಲ್ತ್ ಸೈನ್ಸ್ನ ಸಂಯೋಜಕಿಯವರಾದ ಡಾ. ವಿದ್ಯಾ ಎಸ್ ಪಾಟೀಲ್ ಅತಿಥಿಗಳನ್ನು ಸ್ವಾಗತಿಸಿದರು. ಉಪ ಸಂಯೋಜಕರಾದ ಡಾ. ಅನಿಲ್ ಬರ್ಗಲೆ, ಆಡಳಿತಾಧಿಕಾರಿಗಳು ಮತ್ತು ವಿಭಾಗಗಳ ಮುಖ್ಯಸ್ಥರನ್ನು ಪರಿಚಯಿಸಿದರು. ಡಾ. ಉಪೇಂದ್ರ ಜೋಯಿಶ್ ವಂದನಾರ್ಪಣೆ ಸಲ್ಲಿಸಿದರು.

ಪ್ರತಿಷ್ಠಿತ ರತ್ನಾಕರ ಬ್ಯಾಂಕ ನಿಂದ ಮೂರು ತಲೆಮಾರಿನ ಗ್ರಾಹಕರಿಗೆ ಸನ್ಮಾನ

Article Image

ಪ್ರತಿಷ್ಠಿತ ರತ್ನಾಕರ ಬ್ಯಾಂಕ ನಿಂದ ಮೂರು ತಲೆಮಾರಿನ ಗ್ರಾಹಕರಿಗೆ ಸನ್ಮಾನ

ಮಹಾರಾಷ್ಟ್ರ ಮೂಲದ ಪ್ರತಿಷ್ಠಿತರತ್ನಾಕರ ಬ್ಯಾಂಕ್ (RBL Bank) ಇದು ಹುಬ್ಬಳ್ಳಿಯಲ್ಲಿ ತನ್ನ ಶಾಖೆಯನ್ನು ಸುಮಾರು 42 ವರ್ಷಗಳ ಹಿಂದೆ ತೆರೆಯಿತು. ಆಗಿನಿಂದ ಇಂದಿನವರೆಗೂ ಈ ಬ್ಯಾಂಕು ಬ್ಯಾಂಕಿಂಗ್ ಸೇವೆಯಲ್ಲಿ ಸಾರ್ವಜನಿಕ ವಲಯದಲ್ಲಿಯೇ ತನ್ನದೇ ಆದ ಛಾಪು ಮೂಡಿಸಿದೆ. ಪ್ರಸ್ತುತ ಈ ರತ್ನಾಕರ ಬ್ಯಾಂಕ್ ಮೂರು ತಲೆಮಾರಿನಿಂದ ಈಗಲೂ ಅತ್ಯಂತ ಕ್ರೀಯಾಶೀಲವಾಗಿ ವ್ಯವಹರಿಸುತ್ತಿರುವ ಈಗ ಮೂರನೇ ಜನರೇಷನ್ ಗ್ರಾಹಕರನ್ನು ಗುರುತಿಸಿ ಗೌರವಿಸಲು ಮುಂದಾಗಿದೆ. ಇತ್ತೀಚಿಗೆ ಪ್ರತಿಷ್ಠಿತ ಖಾಸಗಿ ಹೋಟೆಲ್ ಒಂದರಲ್ಲಿ ಮೂರು ತಲೆಮಾರಿನ ಗ್ರಾಹಕರಲ್ಲಿ ಪ್ರಮುಖರಾದ ಹುಬ್ಬಳ್ಳಿ ಮಹಾವೀರ ಗಲ್ಲಿಯ ಪ್ರತಿಷ್ಠಿತ ಮೆ. ಎಸ್. ಬಿ. ಬೀಳಗಿ & ಸನ್ಸ್ ಹೆಸರಿನ ವ್ಯಾಪಾರಿ ಸಂಸ್ಥೆಯ ಮುಖ್ಯಸ್ಥ ಬ್ರಹ್ಮಕುಮಾರ ಎಸ್ ಬೀಳಗಿ, ಇವರ ಪುತ್ರ ಅಜಯ ಬಿ. ಬೀಳಗಿ ಹಾಗೂ ಇವರ ಪುತ್ರಿ ಪ್ರಣೀತ ಎ. ಬೀಳಗಿ ಇವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಯಶೀಲಾ ಬೀಳಗಿ ಮತ್ತು ಚಂದನಾ ಎ. ಬೀಳಗಿ ಇದ್ದರು. ಹಾಗೆಯೇ ಹುಬ್ಬಳ್ಳಿಯ ಇನ್ನೊರ್ವ ಗಿರಿಯ ಗ್ರಾಹಕ ಮೆ| ರಾಧಾಕೃಷ್ಣ ಇಂಡಸ್ಟ್ರೀಸ್ ಮಾಲೀಕರಾದ ಉದಯ ದಡೋತಿ ಮತ್ತು ಪ್ರತಿಭಾ ದಡೋತಿ ಮತ್ತು ಇವರ ಪುತ್ರ ಗುಣಧರ ದಡೋತಿ ಹಾಗೂ ಇವರ ಪತ್ನಿ ಶಲಾಖಾ ಇವರನ್ನು ಸನ್ಮಾನಿಸಿ ಗೌರವಿಸಿದರು ಜೊತೆಗೆ ಅತ್ಯಂತ ಹಿರಿಯ ಗ್ರಾಹಕರು ಬ್ಯಾಂಕನ ಹಿತೈಸಿಗಳೂ ಆದ 92 ವಸಂತಗಳನ್ನು ಕಂಡ ಸುರೇಂದ್ರ ನಾವಳ್ಳಿ ಇವರನ್ನೂ ಬ್ಯಾಂಕ್ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಬ್ಯಾಂಕು ತನ್ನ ಪ್ರತಿಷ್ಠೆಯನ್ನು ಹೆಚ್ಚಿಸಿಕೊಂಡಿದೆ. ಬ್ಯಾಂಕಿನ ಹಿರಿಯ ಅಧಿಕಾರಿ ನಂಜುಂಡ ಸ್ವಾಮಿ, ಬ್ರಾಂಚ್ ಮ್ಯಾನೇಜರ್ ಚಂದ್ರಗೌಡ ಪಾಟೀಲ್, ಟಾಸ್ಕ್ ಮ್ಯಾನೇಜರ್ - ಸಂಗಪ್ಪ ಉಕ್ಕಲಿ, ಸಿಬ್ಬಂದಿ ರತ್ನಾ ಉಪಾಧ್ಯೆ ಮತ್ತು ಕಾವೇರಿ ರಾಥೋಡ್ ಇವರು ಈ ಸನ್ಮಾನ ಸಮಾರಂಭವನ್ನು ನೆರವೇರಿಸಿದರು. ವರದಿ : ಎಸ್. ಆರ್. ಮಲ್ಲಸಮುದ್ರ

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನವರಾತ್ರಿ ಮಹೋತ್ಸವ-2025 ಸಾಂಸ್ಕ್ರತಿಕ ವೈಭವ

Article Image

ಮಂಗಳೂರು: ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ನವರಾತ್ರಿ ಮಹೋತ್ಸವ-2025 ಸಾಂಸ್ಕ್ರತಿಕ ವೈಭವ

ಮಠದಕಣಿ ಶ್ರೀ ವೀರಭದ್ರ - ಮಹಾಮಾಯಿ ದೇವಸ್ಥಾನದ ನವರಾತ್ರಿ ಮಹೋತ್ಸವದಲ್ಲಿ ಮಹಾಮಾಯಿ ಫ್ರೆಂಡ್ಸ್ ಎಸೋಸಿಯೇಶನ್ 48ನೇ ವಾರ್ಷಿಕೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ಬುಧವಾರ(24-9-2025) ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಎಲ್ಲರ ಮೆಚ್ಚುಗೆ ಪಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮಖ್ಯ ಅಥಿತಿಗಳಾಗಿ ಮಕ್ಕಳ ಕಲ್ಯಾಣ ಸಮಿತಿ ದ.ಕ ಜಿಲ್ಲಾ ಅಧ್ಯಕ್ಷೆ ಹಾಗೂ ವಕೀಲರಾದ ಡಾ. ಅಕ್ಷತಾ ಆದರ್ಶ್ ಮೂಡುಬಿದಿರೆ ಮತ್ತು ಸಂಪತ್ ಜೈನ್ ಮುಂಡೂರು, ಬಾಲಕೃಷ್ಣ ಕಲ್ಬಾವಿ, ವಿಶ್ವನಾಥ್ ಶೆಟ್ಟಿಗಾರ, ಸುದೇಶ್ ಜೈನ್ ಮಕ್ಕಿಮನೆ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೃತ್ಯ ನಿರ್ದೇಶಕರುಗಳಾದ ರೀಮಾ ಜಗನ್ನಾಥ್ ಮಾರ್ನಮಿಕಟ್ಟೆ , ವಿದುಷಿ ಪ್ರಾರ್ಥನಾ ರೋಹಿತ್ ಹೊಸಬೆಟ್ಟು , ವಂಸತ್ ಕುಮಾರ್, ಆಶಿಶ್ ಅಂಚನ್, ಹರೀಶ್ ಆಚಾರ್ಯ ಅವರನ್ನು ಸನ್ಮಾನಿಸಿಗೌರವಿಸಲಾಯಿತು. ಪ್ರಿಯಾ ಸುದೇಶ್ ಕುಮಾರ್ ಮಂಗಳೂರು ನಿರೂಪಿಸಿದರು. ಗೌರವ್ ಶೆಟ್ಟಿಗಾರ, ಉಷಾ ಅಶೋಕ್, ಧಾತ್ರಿ, ಕೃತಿ ಸನಿಲ್, ಪ್ರೇರಣ ಜೆ,ಅಪೇಕ್ಷಾ ಎ. ಮೊದಲಾದವರು ಸಹಕರಿಸಿದರು.

ಬೆಳ್ತಂಗಡಿ: ನೂತನ ಶಿಲಾಮಯ ಬಸದಿಯ ಮುಖ್ಯ ದ್ವಾರದ ಕಲ್ಲಿನ ದಾರಂದವನ್ನು‌ ಇಡುವ ಕಾರ್ಯಕ್ರಮ

Article Image

ಬೆಳ್ತಂಗಡಿ: ನೂತನ ಶಿಲಾಮಯ ಬಸದಿಯ ಮುಖ್ಯ ದ್ವಾರದ ಕಲ್ಲಿನ ದಾರಂದವನ್ನು‌ ಇಡುವ ಕಾರ್ಯಕ್ರಮ

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗುಂಡದ ಬಸದಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರದ ನಿಮಿತ್ತ ನಿರ್ಮಾಣಗೊಂಡ ನೂತನ ಶಿಲಾಮಯ ಬಸದಿಯ ಮುಖ್ಯ ದ್ವಾರದ ಕಲ್ಲಿನ ದಾರಂದವನ್ನು‌ ಇಡುವ ಕಾರ್ಯಕ್ರಮವು ಇಂದು ಬೆಳಿಗ್ಗೆ ಕಾರ್ಕಳ ಶ್ರೀ ಜೈನಮಠದ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಮಾರ್ಗದರ್ಶನ ಹಾಗೂ ಪಾವನ ಸಾನ್ನಿಧ್ಯದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಗಣ್ಯರು, ಶ್ರಾವಕ-ಶ್ರಾವಕಿಯರು ಉಪಸ್ಥಿತರಿದ್ದರು.

ಡಾ. ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

Article Image

ಡಾ. ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಪುರಸ್ಕಾರ

ಮೈಸೂರಿನ ಆಚಾರ್ಯ ಗುರುಕುಲದ ಕುಲ ಸಚಿವರು ಹಾಗೂ ಖ್ಯಾತ ವಾಗ್ಮಿಗಳು ಶಿಕ್ಷಣ ತಜ್ಞರು, ವಿದ್ಯಾರ್ಥಿ ಪೋಷಕ ಆಪ್ತ ಸಮಾಲೋಚಕರಾದ ವಿದ್ಯಾ ವಾಚಸ್ಪತಿ ಡಾ ಮೋಹನ ಕುಮಾರ ಶಾಸ್ತ್ರಿ ಅವರಿಗೆ ರಾಷ್ಟ್ರ ಮಟ್ಟದ ಮಹಾತ್ಮ ಗಾಂಧಿ ನ್ಯಾಷನಲ್ ಸರ್ವೀಸ್ ಪುರಸ್ಕಾರ 2025 ಲಭಿಸಿದೆ.

ಗರ್ಡಾಡಿ ಗುಂಡದ ಬಸದಿಯ : ಶಿಲಾನ್ಯಾಸ ಕಾರ್ಯಕ್ರಮ

Article Image

ಗರ್ಡಾಡಿ ಗುಂಡದ ಬಸದಿಯ : ಶಿಲಾನ್ಯಾಸ ಕಾರ್ಯಕ್ರಮ

ಗರ್ಡಾಡಿ ಗುಂಡದ ಬಸದಿಯ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರದ ನಿಮಿತ್ತ ನಿರ್ಮಾಣಗೊಂಡ ನೂತನ ಶಿಲಾಮಯ ಬಸದಿಯ ಮುಖ್ಯ ದ್ವಾರದ ಕಲ್ಲಿನ ದಾರಂದವನ್ನು ಕಾರ್ಕಳ ಶ್ರೀ ಜೈನಮಠದ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ಸೆ.24 ರಂದು ಬೆಳಗ್ಗೆ 8.45ಗಂಟೆಗೆ ನೆರವೇರಿಸಲಿರುವರು ಎಂದು ಪ್ರಕಟಣೆ ತಿಳಿಸಿದೆ.

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ್ಯಕ್ರಮ

Article Image

ಎಕ್ಸಲೆಂಟ್ ಸಂಸ್ಥೆಯಲ್ಲಿ ನವರಾತ್ರಿ ನವಶಕ್ತಿ ಸನ್ಮಾನ ಕಾರ್ಯಕ್ರಮ

ಮೂಡಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ನವರಾತ್ರಿಯ ಪ್ರಯುಕ್ತ “ನವರಾತ್ರಿ - ನವಶಕ್ತಿ” ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು. “ಮಹಿಳಾ ಸ್ವಾವಲಂಬನೆ ಸಮಾಜದ ಪ್ರಗತಿಯ ಮೂಲವಾಗಿದೆ, ಹೆಣ್ಣುಮಕ್ಕಳಿಗೆ ಕನಸು ಕಾಣಲು ಹಕ್ಕು ಇದೆ ಸಾಧಿಸಲು ಶಕ್ತಿ ಎಂದರು ಜೊತೆಗೆ ಎಕ್ಸಲೆಂಟ್ ಸಂಸ್ಥೆಯ ಸ್ವಚ್ಛ ಪರಿಸರವನ್ನು ಮುಖ್ಯ ಅತಿಥಿಯಾಗಿ ಆಗಮಿಸಿದ ಇಂದು.ಎಂ. ಮುಖ್ಯ ಅಧಿಕಾರಿಗಳು ಮೂಡುಬಿದರೆ ಪುರಸಭೆ ಇವರು ಪ್ರಶಂಸಿಸಿದರು. ಈ ಕಾರ್ಯಕ್ರಮವು ನವರಾತ್ರಿಯ ಆಧ್ಯಾತ್ಮಿಕತೆಯ ಜೊತೆಗೆ ಹೆಣ್ಣಿನ ಮಹತ್ವವನ್ನು ಬಿಂಬಿಸುತ್ತದೆ.“ಹೆಣ್ಣು ತನ್ನ ಜೀವನದಲ್ಲಿ ಅನೇಕ ಪಾತ್ರಗಳನ್ನು ನಿರ್ವಹಿಸುತ್ತಾಳೆ. ನವರಾತ್ರಿಯು ಹೆಣ್ಣಿನ ಶಕ್ತಿಯ ಪ್ರತೀಕ” ಎಂದು ಸಂಸ್ಥೆಯ ಕಾರ್ಯದರ್ಶಿಯವರಾದ ರಶ್ಮಿತಾ ಜೈನ್ ರವರು ಮಾತನಾಡಿ ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿದರು. ನಕಾರಾತ್ಮಕತೆಯನ್ನು ನವಶಕ್ತಿಗಳು ಸಕಾರಾತ್ಮಕತೆಯನ್ನಾಗಿ ಪರಿವರ್ತಿಸಲಿ ಎಂದು ನವಶಕ್ತಿಯ ಮಹತ್ವವನ್ನು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಯುವರಾಜ್ ಜೈನ್ ನವರು ತಿಳಿಸಿದರು. ಶಾರದಾದೇವಿಗೆ ಪುಷ್ಪ ಅರ್ಪಿಸಿ, ದೀಪವನ್ನು ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಸುಸಂದರ್ಭದಲ್ಲಿ ಅತಿಥಿಯಾಗಿ ಆಗಮಿಸಿದ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ರವರ ಮಾತೃಶ್ರೀ ಪದ್ಮಾವತಿ ಅಮ್ಮನವರನ್ನು ವಿಶೇಷವಾಗಿ ಗೌರವ ಪೂರ್ವಕವಾಗಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಹಾಗೂ ನವಶಕ್ತಿ ಸ್ವರೂಪದ ನವನಾರಿಯರಾದ ಅಮರಾಜಿ, ಸುಮಿತ್ರಾ, ಚಂದನಾ, ದೀಪಾ ಉಮೇಶ್ ರಾವ್, ಅನಿತಾ ಸಿಕ್ವೇರಾ, ಸೌಮ್ಯ ಕುಲದೀಪ್, ದಿವ್ಯಾ ಪಡಿವಾಳ್, ರೇಷ್ಮಾ ವರ್ಮಾ ಹಾಗೂ ಪ್ರಿಯಾ ಕ್ವಿನಿ ರೋಡ್ರಿಗಸ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಿತಗೊಂಡ ದೀಪಾ ಉಮೇಶ್ ರಾವ್ ಹಾಗೂ ಪ್ರಿಯಾ ಕ್ವಿನಿ ರೋಡ್ರಿಗಸ್ ಇಂದಿನ ಕಾರ್ಯಕ್ರಮದ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ಎಕ್ಸಲೆಂಟ್ ಸಿ ಬಿ ಎಸ್ ಇ ಶಾಲೆಯ ಪ್ರಾಂಶುಪಾಲರಾದ ಪ್ರಸಾದ್, ಅಪೇಕ್ಷರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನೆರವೇರಿಸಿಕೊಟ್ಟರು. ಈ ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿಯಾದ ಅರ್ಚನಾ ಹಾಗೂ ಸ್ವಾತಿಯಾವರು ನೆರವೇರಿಸಿ ಎಕ್ಸಲೆಂಟ್ ಸಿಬಿಎಸ್ಇ ಶಾಲೆಯ ಪ್ರಾಂಶುಪಾಲರಾದ ಪ್ರಸಾದ್ ರವರು ವಂದಿಸಿದರು.

ಶಾಂತಿನಾಥ ಪಾಯಪ್ಪ ಕುರನಿರವರು ಪಿ.ಎಸ್.‌ಐ ಆಗಿ ಆಯ್ಕೆ

Article Image

ಶಾಂತಿನಾಥ ಪಾಯಪ್ಪ ಕುರನಿರವರು ಪಿ.ಎಸ್.‌ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ನಿವಾಸಿಯಾಗಿರುವ ಶಾಂತಿನಾಥ ಪಾಯಪ್ಪ ಕುರನಿರವರು ಪೋಲೀಸ್‌ ಸಬ್ ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆ‌ಯ್ಕೆಯಾಗಿರುತ್ತಾರೆ. ಇವರು 132‌ ರಾಂಕ್ ಪಡೆದಿರುತ್ತಾರೆ. ಇವರು ಪಾಯಪ್ಪ ಕುರನಿ ಮತ್ತು ಸುಜಾತ ಕುರನಿ ದಂಪತಿಗಳ ಪುತ್ರ.

ವಿದ್ಯಾರ್ಥಿಗಳ ಬದುಕಿಗೆ ವಿದ್ಯಾಪ್ರೋತ್ಸಾಹ ಧನ ಶೈಕ್ಷಣಿಕ ಅಡಿಗಲ್ಲು: ಅಜಿತ್ ಕುಮಾರ್ ಕೊಕ್ರಾಡಿ

Article Image

ವಿದ್ಯಾರ್ಥಿಗಳ ಬದುಕಿಗೆ ವಿದ್ಯಾಪ್ರೋತ್ಸಾಹ ಧನ ಶೈಕ್ಷಣಿಕ ಅಡಿಗಲ್ಲು: ಅಜಿತ್ ಕುಮಾರ್ ಕೊಕ್ರಾಡಿ

ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಪರಿಪೂರ್ಣತೆಯತ ಸಾಗಬೇಕಾದರೆ ಶಿಕ್ಷಣವು ಬಹಳ ಮುಖ್ಯವಾಗಿ ಬೇಕು. ಶಿಕ್ಷಣ ಎನ್ನುವುದು ಅವರ ಬದುಕಿಗೆ ಭದ್ರತೆಯ ಅಡಿಗಲ್ಲು ಆಗಬೇಕಾದರೆ ಇಂತಹ ವಿದ್ಯಾ ಪ್ರೋತ್ಸಾಹ ಧನದ ಅವಶ್ಯಕತೆ ಖಂಡಿತ ಇದೆ. ಅಂತಹ ಕಾರ್ಯವನ್ನು ಮಾಡುತ್ತಿರುವ ಕೆಲ್ಲಗುತ್ತು ಕಿನ್ಯಮ ಯಾನೆ ಗುಣಾವತಿ ಅಮ್ಮ ಮೆಮೋರಿಯಲ್ ಟ್ರಸ್ಟ್ ಹಾಗೂ ಬೆಳ್ತಂಗಡಿ ತಾಲೂಕಿನ ಸಮಸ್ತ ಶ್ರಾವಕ ಹಾಗೂ ಶ್ರಾವಿಕೆಯರ ಈ ಕಾರ್ಯವು ಮಹತ್ತರವಾಗಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳುವುದರೊಂದಿಗೆ ಮೌಲ್ಯಾಧಾರಿತ ಬದುಕನ್ನು ಕಟ್ಟಿಕೊಳ್ಳಿ. ಅಂತಹ ಮೌಲ್ಯವೇ ನಮ್ಮ ನಿಮ್ಮೆಲ್ಲರ ಬದುಕಿನ ಭೂಷಣವಾಗಲಿ ಎಂದು ಗೇರುಕಟ್ಟೆ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿರವರು ಮಾತಾಡಿದರು. ಅವರು ಬೆಳ್ತಂಗಡಿಯ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿಯ ಸಮುಚ್ಛಯದಲ್ಲಿ ಇರುವ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮನವರ 36ನೇ ಪುಣ್ಯತಿಥಿಯ ಸಂದರ್ಭದಲ್ಲಿ ಶ್ರೀ ಅತಿಶಯ ಕ್ಷೇತ್ರ ಹುಂಬುಜ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಶ್ರೀಮದ್ದದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜೈನ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬೆಳ್ತಂಗಡಿಯ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆ. ಜಯವರ್ಮರಾಜ ಬಳ್ಳಾಲ್ ರವರು ವಹಿಸಿಕೊಂಡು ಸಭೆಯನ್ನು ಮುನ್ನಡೆಸಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಡಾ. ಪ್ರಿಯ ಬಳ್ಳಾಲ್ ರವರು ಟ್ರಸ್ಟ್ ವತಿಯಿಂದ ನೀಡುತ್ತಿರುವ ವೈದ್ಯಕೀಯ ನೆರವಿನ ಕುರಿತು ವಿವರವಾಗಿ ಮಾಹಿತಿಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಕೆ.ರಾಜವರ್ಮ ರಾಜ ಬಳ್ಳಾಲ್ ಹಾಗೂ ಮಾಲಾಡಿ ಗುತ್ತು ವಜ್ರ ಕುಮಾರ್ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಟ್ರಸ್ಟ ಹಾಗೂ ದಾನಿಗಳ ಸಹಕಾರದಿಂದ ಈ ವರ್ಷ 753 ವಿದ್ಯಾರ್ಥಿಗಳಿಗೆ 22,10,550 ರೂಪಾಯಿಯನ್ನು ವಿದ್ಯಾಪ್ರೋತ್ಸಾಹ ಧನವಾಗಿ ವಿತರಿಸಲಾಯಿತು. ಇದೇ ರೀತಿ ಈ ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ಕಳೆದ 25 ವರ್ಷಗಳಿಂದ ನೀಡುತ್ತಾ ಬಂದಿರುವುದು ನಮ್ಮ ಸಮಾಜಕ್ಕೆ ಇದೊಂದು ಹೆಮ್ಮೆಯ ಸಂಗತಿಯಾಗಿದೆ. ಇಷ್ಟು ಮಾತ್ರವಲ್ಲದೆ 12 ಜನರಿಗೆ ಕ್ಯಾನ್ಸರ್ ಹಾಗೂ ಇನ್ನಿತರ ವೈದ್ಯಕೀಯ ಚಿಕಿತ್ಸೆಗಾಗಿ ನೀಡಿರುವ ಸಹಕಾರವನ್ನು ನೆನಪಿಸಲಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡು, ವಕೀಲರಾದ ಶಶಿಕಿರಣ್ ಜೈನ ಸ್ವಾಗತಿಸಿ, ಧವಳ ಸಹಕರಿಸಿ, ನಿರಂಜನ್ ಜೈನ್ ಧನ್ಯವಾದ ಸಲ್ಲಿಸಿ, ಧರಣೇಂದ್ರ ಕೆ ಜೈನ್ ಕಾರ್ಯಕ್ರಮ ಸಂಯೋಜಿಸಿ ನಿರ್ವಹಿಸುವುದರೊಂದಿಗೆ ಸಮಾಪನಗೊಂಡಿತು.

ರತ್ನತ್ರಯ ಜೈನ ಮಿಲನ್: ಮಾಸಿಕ ಸಭಾ ವರದಿ

Article Image

ರತ್ನತ್ರಯ ಜೈನ ಮಿಲನ್: ಮಾಸಿಕ ಸಭಾ ವರದಿ

ರತ್ನತ್ರಯ ಜೈನ ಮಿಲನ ಮಾಸಿಕ ಸಭೆಯು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವು ಅತಿಥಿಗಳಿಂದ ದೀಪಪ್ರಜ್ವಲನೆ ಪ್ರಾರಂಭಗೊಂಡು ಮುಖ್ಯ ಅತಿಥಿಗಳಾದ ನೀರಜ ನಾಗೇಂದ್ರ ಕುಮಾರ ದಶಲಕ್ಷಣಗಳ (ಕ್ಷಮಾ, ಮಾರ್ದವ, ಆರ್ಜವ, ಶೌಚ, ಸತ್ಯ, ಸಂಯಮ, ತಪ, ತ್ಯಾಗ, ಅಕಿಂಚನ್ಯ ಮತ್ತು ಬ್ರಹ್ಮಚರ್ಯ) ಮಹತ್ವದ ಕುರಿತು ಉಪನ್ಯಾಸ ನೀಡಿದರು. ಉಷಾರಾಣಿ ‘ಉತ್ತಮ ಕ್ಷಮಾ’ ಎಂಬ ವಿಷಯದ ಕುರಿತು ವಿಶದವಾದ ಭಾಷಣ ಮಾಡಿದರು. ಸುಖಾನಂದ ಅವರು, ನಡೆಯಲಿರುವ ಜಾತಿಗಣತಿಯ ಸಂದರ್ಭದಲ್ಲಿ ‘ಜೈನ - ದಿಗಂಬರ’ ಎಂದು ನಮೂದಿಸಲು ಸದಸ್ಯರಿಗೆ ಸಲಹೆ ನೀಡಿದರು. ಅನಂತಕುಮಾರಿ ಪದ್ಮರಾಜ್ ಅವರು ಆತ್ಮೀಯ ಸ್ವಾಗತ ಭಾಷಣ ಮಾಡಿದರು. ಬಳಿಕ ಮಾಲಿನಿ ಬ್ರಹ್ಮಣ್ಣ ರತ್ನತ್ರಯ ಮಿಲನದ ಉದ್ದೇಶವನ್ನು ವಿವರಿಸಿದರು. ಪೂರ್ಣಿಮಾ ಜಯಂತ್ ಪರ್ವವಾಚನ ಮಾಡಿದರು. ಸೆಪ್ಟೆಂಬರ್ ತಿಂಗಳಲ್ಲಿ ವಿವಾಹ ವಾರ್ಷಿಕೋತ್ಸವ ಹಾಗು ಹುಟ್ಟುಹಬ್ಬ ಆಚರಿಸಿಕೊಂಡ ಸದಸ್ಯರಿಗೆ ಮಹಾವೀರ ಕುಮಾರ್ ಅವರು ಹಾರ್ದಿಕ ಶುಭಾಶಯ ಕೋರಿದರು. ರಾಣಿ ಪ್ರಫುಲ್ಲ ಅವರು ಅತಿಥಿಗಳ ಪರಿಚಯ ಮಾಡಿಕೊಟ್ಟರು. ಬಳಿಕ ಸಭಾಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ಅಧ್ಯಕ್ಷರ ನುಡಿಗಳನ್ನು ಹಂಚಿಕೊಂಡರು. ಕಾರ್ಯಕ್ರಮದ ಆತಿಥ್ಯವನ್ನು ಪದ್ಮ ಸೂರಿಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಷಾರಾಣಿ, ನೀರಜ ನಾಗೇಂದ್ರ ಕುಮಾರ, ಪ್ರೇಮ, ಸುಖಾನಂದ ಹಾಗು ರತ್ನತ್ರಯ ಜೈನ ಮಿಲನ ಅಧ್ಯಕ್ಷರಾದ ನವೀನ್ ಕುಮಾರ್ ಗುಬ್ಬಿ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಅನಂತಕುಮಾರಿಯವರು ನಿರೂಪಿಸಿ. ಶ್ವೇತಾ ನವೀನ್ ಕುಮಾರ್ ಅವರ ವಂದನಾರ್ಪಣೆಯೊಂದಿಗೆ ಸಭೆ ಸಮಾರೋಪಗೊಂಡಿತು.

ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಗೆ : ಶಿಕ್ಷಣ ಸೇವಾ ರತ್ನ ಪ್ರಶಸ್ತಿ

Article Image

ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಗೆ : ಶಿಕ್ಷಣ ಸೇವಾ ರತ್ನ ಪ್ರಶಸ್ತಿ

ಕರ್ನಾಟಕ ಪ್ರೆಸ್ ಕ್ಲಬ್ ಬೆಂಗಳೂರು ಇವರು ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷನ್ ಇವರ ಜನ್ಮದಿನಾಚರಣೆ ಮತ್ತು ಶಿಕ್ಷಕ ದಿನಾಚರಣೆಯ ಅಂಗವಾಗಿ ಕೊಡಮಾಡುವ ರಾಜ್ಯಮಟ್ಟದ "ಶಿಕ್ಷಣ ಸೇವಾ ರತ್ನ" ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಶಿಕ್ಷಕ ಲಕ್ಷ್ಮಣ್ ಮಲ್ಲಸಮುದ್ರಇವರು ಭಾಜನರಾಗಿದ್ದಾರೆ. ಲಕ್ಷ್ಮಣ್ ರವರು ಕಳೆದ 35 ವರ್ಷಗಳಿಂದ ಶಿಕ್ಷಕರಾಗಿ ಅತ್ಯತ್ತಮ ಸೇವೆ ಸಲ್ಲಿಸುತ್ತಿದ್ದು ಸಹಸ್ರಾರು ಮಕ್ಕಳ ಬಾಳಲ್ಲಿ ಬೆಳಕಾಗಿದ್ದಾರೆ. ಇವರು ಮಕ್ಕಳಿಗೆ ಕೇವಲ ಅಕ್ಷರಗಳನ್ನು ಭೋದನೆ ಮಾಡಿಲ್ಲ ಅವರು ವಿದ್ಯಾರ್ಥಿಗಳಿಗೆ ಬದುಕುವ ರೀತಿಯನ್ನು ಕಲಿಸಿ ಅವರ ಭವಿಷ್ಯವನ್ನು ರೂಪಿಸಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರು ಕಾಡ ಕಲ್ಲನ್ನು ಸುಂದರ ಮೂರ್ತಿಯನ್ನಾಗಿ ಮಾಡುವ ಶಿಲ್ಪಿಗಳಿದ್ದಹಾಗೆ ಇದು ಶಿಕ್ಷಕರಿಂದ ಮಾತ್ರ ಸಾಧ್ಯ ಈ ಕಾರಣಕ್ಕೆ ಶಿಕ್ಷಕರ ಬಗ್ಗೆ ಅಪಾರವಾದ ಗೌರವ ಅಭಿಮಾನ ಇರುವದು ಸಹಜ. ಪ್ರಸ್ತುತ ಗದಗ ಜಿಲ್ಲೆ ಶಿರಹಟ್ಟಿ ತಾಲೂಕ ಲಕ್ಷ್ಮೇಶ್ವರ ದಲ್ಲಿ ಸೇವೆ ಸಲ್ಲಿಸುತ್ತಿದ್ದು, ಇಲ್ಲಿನ ಶಾಲೆಯೊಂದರಲ್ಲಿ ಸ್ಥಳೀಯರ ಸಹಕಾರ ಸಹಾಯದಿಂದ ಸುಂದರವಾದ ಕೊಠಡಿಗಳನ್ನು ನಿರ್ಮಿಸಿ ಅದರ ಆವರಣದಲ್ಲಿ ಕೈದೋಟ ಹೂವಿನ ಗಿಡಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಿದ್ದಾರೆ. ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ರಾಷ್ಟ್ರಪ್ರೇಮ, ಸಹಬಾಳ್ವೆ ಸಮಾನತೆಯ ತಿಳುವಳಿಕೆ ನೀಡಿ ಮಕ್ಕಳ ಮನದಲ್ಲಿ ಹೆಮ್ಮೆಯ ಶಿಕ್ಷಕರಾಗಿ ರುಪುಗೊಂಡಿದ್ದಾರೆ. ಇವರ ಅತ್ಯುತ್ತಮ ಸೇವೆಯನ್ನು ಗಮನಿಸಿದ ಕರ್ನಾಟಕ ಪ್ರೆಸ್ ಕ್ಲಬ್ ಪ್ರಸಕ್ತ ಸಾಲಿನಲ್ಲಿ "ಶಿಕ್ಷಣ ಸೇವಾ ರತ್ನ ಪ್ರಶಸ್ತಿ" ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ದಿನಾಂಕ 24-9-2025 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ 3-30 ಕ್ಕೆ ಜರುಗಲಿದ್ದು ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರು, ಮಂತ್ರಿಗಳು ಶಾಸಕರು, ಸಂಸದರು ಗಣ್ಯರು ಭಾಗವಹಿಸಲಿದ್ದಾರೆ. ತನ್ನಿಮಿತ್ಯ ಇವರ ಸಂಕ್ಷಿಪ್ತ ಪರಿಚಯ : ದಿನಾಂಕ: 22-05-1966 ರಂದು ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಹರ್ಲಾಪುರ ಗ್ರಾಮದಲ್ಲಿ ರಾಮಣ್ಣ ಮತ್ತು ಸಾವಿತ್ರಮ್ಮ ದಂಪತಿಗಳ ನಾಲ್ಕು ಮಕ್ಕಳಲ್ಲಿ ಕೊನೆಯವರಾಗಿ ಜನಿಸಿದರು. (ಜೈನ ಸಮಾಜದ ಗಣ್ಯರೂ, ಹಿರಿಯ ಬರಹಗಾರರು ಸಾಮಾಜಿಕ ಕಾರ್ಯಕರ್ತರು ಆದ ಶ್ರೀ ಶಾಂತರಾಜ ಮಲ್ಲಸಮುದ್ರ ಇವರು ಇವರ ಹಿರಿಯ ಸಹೋದರ). ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸ್ವಗ್ರಾಮದಲ್ಲಿ, ಮಾಧ್ಯಮಿಕ ಶಿಕ್ಷಣ, ಕಾಲೇಜ್ ಶಿಕ್ಷಣ ಹಾಗೂ ಶಿಕ್ಷಕ ತರಬೇತಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ್ ಪಟ್ಟಣದಲ್ಲಿ ಮುಗಿಸಿದರು. ಹಾಸನ ಜಿಲ್ಲೆ ಶ್ರವಣಬೆಳಗೊಳದ ಶ್ರೀಮಠವು ನಡೆಸುವ ಶ್ರೀ ಅಂಬಿಕಾ ಶಾಲೆಯಲ್ಲಿ ಶಿಕ್ಷಕ ವೃತ್ತಿ ಪ್ರಾರಂಭಿಸಿ ಇಲ್ಲಿ 10-06-1990 ರಿಂದ 04-01-1999 ರ ವರೆಗೆ ಇಲ್ಲಿ ಸೇವೆ ಸಲ್ಲಿಸಿದ್ದಾರೆ. ನಂತರ 1999ರಲ್ಲಿ ಹಾಸನ ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲಿ ಸರಕಾರಿ ಶಾಲಾ ಶಿಕ್ಷಕರಾಗಿ ನಿಯುಕ್ತಿಗೊಂಡು ದಿನಾಂಕ 05.01.1999 ರಿಂದ 07-07-2000 ರವರೆಗೆ ಸ .ಹಿ. ಪ್ರಾಥಮಿಕ ಶಾಲೆ ಬಿ ಹೊನ್ನೆನಹಳ್ಳಿ ಹೋಂ.ಬಾಗೂರು. ತಾಲೂಕು ಚನ್ನರಾಯಪಟ್ಟಣ ಇಲ್ಲಿ ಸೇವೆ ನಂತರ 08.07.2000 ರಿಂದ 07.03.2003 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ ಹೊನ್ನೇನಹಳ್ಳಿ ಬೆಕ್ಕ ಹೋಬಳಿ ಕ್ಲಸ್ಟರ್ ಶ್ರವಣಬೆಳಗೊಳ ಜಿಲ್ಲಾ ಹಾಸನ ಇಲ್ಲಿಗೆ ವರ್ಗಾವಣೆ ಗೊಂಡರು. ಮುಂದೆ ಹಾಸನ ಜಿಲ್ಲೆಯಿಂದ ಗದಗ ಜಿಲ್ಲೆಗೆ ವರ್ಗಾವಣೆಗೊಂದು ದಿ. 08.03.2003 ರಿಂದ 18.06.2008 ರವರೆಗೆ ಸರ್ಕಾರಿ ಹಿರಿಯ ಗಂಡು ಮಕ್ಕಳ ಶಾಲೆ ಸೂರಣಗಿ ತಾಲೂಕು. ಶಿರಹಟ್ಟಿ ಜಿಲ್ಲಾ ಗದಗ ಇಲ್ಲಿ ನಂತರ 18.06.2008ರಿಂದ 03.09.2013ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆದರಹಳ್ಳಿ ತಾ. ಲಕ್ಷ್ಮೇಶ್ವರ ಜಿಲ್ಲೆ ಗದಗ ನಂತರ 04.09.2013ರಿಂದ ಇಲ್ಲಿಯವರೆಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಡಾಕ್ಟರ್ ಬಿ ಆರ್ ಅಂಬೇಡ್ಕರ್ ನಗರ ಲಕ್ಷ್ಮೇಶ್ವರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಟ್ಟು ಸೇವೆ 35 ವರ್ಷಗಳ ಸುದೀರ್ಘ ಸೇವೆಯಲ್ಲಿ ಜೀವನದುದ್ದಕ್ಕೂ ಆದರ್ಶ ಮತ್ತು ಶಿಸ್ತು ಮೈಗೂಡಿಸಿಕೊಂಡ ಇವರು ವಿದ್ಯಾರ್ಥಿಗಳ ನೆಚ್ಚಿನ ಗುರುಗಳಾಗಿ ಆದರ್ಶಪ್ರಾಯರಾಗಿದ್ದಾರೆ. ಇತರ ಸಾಮಾಜಿಕ ಚಟುವಟಿಕೆಗಳು: ಪ್ರತಿ ವರ್ಷ ದಸರಾ ಸಂಧರ್ಭದಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನ ಲಕ್ಷ್ಮೇಶ್ವರದಲ್ಲಿ ಐದು ವರ್ಷದಿಂದ ಪುರಾಣ ಪ್ರವಚನ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ಸುಮಾರು ಹತ್ತು ವರ್ಷದಿಂದ ಬಿ.ಎಲ್.ಓ. (ಬೂತ್ ಲೆವೆಲ್ ಆಫೀಸರ್) ಅಂತ ಕಂದಾಯ ಇಲಾಖೆಯ ಜೊತೆಗೆ ಅಂದರೆ ಹೊಸದಾಗಿ ಮತದಾರರನ್ನು ಮತ ಪಟ್ಟಿಗೆ ಸೇರಿಸುವುದು, ತಿದ್ದುಪಡೆ ಮಾಡುವುದು, ಬೇರೆ ಕಡೆ ವರ್ಗಾವಣೆ ಆದರೆ ವರ್ಗಾವಣೆ ಮಾಡುವುದು ಇತ್ಯಾದಿ ಶಿಕ್ಷಣ ಇಲಾಖೆಯ ಕೆಲಸದ ಜೊತೆಗೆ ಕಂದಾಯ ಇಲಾಖೆಯ ಕೆಲಸವನ್ನು ಕೂಡ ಮಾಡುವ ಮೂಲಕ ಎಲ್ಲಾ ಸರಕಾರಿ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಏತನ್ಮದ್ಯ ದಿನಾಂಕ 15.05.1995 ರಂದು ಸ್ವಗ್ರಾಮದವರೇ ಆದ ಶಿಕ್ಷಕಿ ಸಾವಿತ್ರಿ ಇವರೊಂದಿಗೆ ವಿವಾಹವಾಗಿದ್ದು ಈ ಶಿಕ್ಷಕ ದಂಪತಿಗಳು ಒಂದೇ ಜಿಲ್ಲೆ ಯಲ್ಲಿ ಕಳೆದ ಕೆಲವು ವರ್ಷಗಳಿಂದ ಸೇವೆಯಲ್ಲಿದ್ದಾರೆ. ಇವರ ಸಾಧನೆಯ ಹಿಂದೆ ಇವರ ಪತ್ನಿಯ ಸಹಕಾರ ಪ್ರೋತ್ಸಾಹ ಬಹುಮಟ್ಟಿಗೆ ಕಾರಣವಾಗಿದೆ ಎನ್ನಬಹುದು. ಇವರಿಗೆ ಇಬ್ಬರು ಪುತ್ರರು ಇದ್ದು ಓರ್ವ ಸ್ನಾತಕೋತ್ತರ ಪದವಿ ವಿದ್ಯಾರ್ಥಿ, ಇನ್ನೊರ್ವ ವೈದ್ಯಕೀಯ ಶಿಕ್ಷಣ ಪಡೆಯಲು ಪ್ರವೇಶ ಪರೀಕ್ಷೆ ಬರುತ್ತಿದ್ದಾನೆ. ಇವರ ಪ್ರತಿಭೆಗೆ ತಕ್ಕ ಪುರಸ್ಕಾರ ದೊರೆಯಲಿ ಇನ್ನೂ ಹಲವಾರು ಪ್ರಶಸ್ತಿ ಸಮ್ಮಾನಗಳು ಸಿಗಲಿ. ಶಾಂತರಾಜ ಮಲ್ಲಸಮುದ್ರ ಲೇಖಕರು

ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವ

Article Image

ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವ

ಶಿವಮೊಗ್ಗ: ಹೊಂಬುಜ ಶ್ರೀ ಜೈನ ಮಠದಲ್ಲಿ ಶ್ರೀಶರನ್ನವರಾತ್ರಿ ವಿಶೇಷ ಪೂಜಾ ಮಹೋತ್ಸವವು 22-09-2025 ರಿಂದ 02-10-2025 ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ವಿಜಯದಶಮಿಯವರೆಗೆ ಶಕ್ತಿ ದೇವಿಗೆ ವಿವಿಧ ಅಲಂಕಾರಗಳಿಂದ ವಿಶೇಷ ಪೂಜೆ ನೆರವೇರಲಿದೆ. 22-09-2025 ಸೋಮವಾರ ಘಟಸ್ಥಾಪನೆ: ಹೂವಿನ ಅಲಂಕಾರ 23-09-2025, ಮಂಗಳವಾರ ಭೈರವಿ ಪದ್ಮಾವತಿ ದರ್ಶನ 24-09-2025, ಬುಧವಾರ ಮುತ್ತಿನ ಅಲಂಕಾರ 25-09-2025, ಗುರುವಾರ ಹಣ್ಣಿನ ಅಲಂಕಾರ 26-09-2025, ಶುಕ್ರವಾರ (ಲಕ್ಷಹೂವಿನ ಪೂಜೆ) ಸುವರ್ಣ ಅಲಂಕಾರ 27-09-2025, ಶನಿವಾರ ಸೀರೆ ಅಲಂಕಾರ 28-09-2025, ಭಾನುವಾರ ಧಾನ್ಯಗಳ ಅಲಂಕಾರ 29-09-2025 ಸೋಮವಾರ (ಸರಸ್ವತಿ ಪೂಜೆ) ನವಿಲಿನ ಅಲಂಕಾರ 30-09-2025. ಮಂಗಳವಾರ (ಜೀವದಯಾಷ್ಟಮಿ) ಬಳೆ ಅಲಂಕಾರ 01-10-2025, ಬುಧವಾರ (ಆಯುಧ ಪೂಜೆ) ಸುವರ್ಣ ಅಲಂಕಾರ 02-10-2025, ಗುರುವಾರ (ವಿಜಯದಶಮಿ) ಸುವರ್ಣ ಅಲಂಕಾರ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಪಲ್ಲಕ್ಕಿ ಉತ್ಸವದೊಂದಿಗೆ ಬನ್ನಿ ಮಂಟಪದವರೆಗೆ ಸ್ಯಾಕ್ರೋಫೋನ್, ಚಂಡೆ, ಡೊಳ್ಳುಕುಣಿತ, ಸಕಲ ಮಂಗಲವಾದ್ಯಗಳೊಂದಿಗೆ ಸಾಲಾಂಕೃತ ಶೋಭಾಯಾತ್ರೆ ನಡೆಯಲಿದೆ.

ಡಾ. ಅಜಿತಪ್ರಸಾದ ಇವರು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ

Article Image

ಡಾ. ಅಜಿತಪ್ರಸಾದ ಇವರು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ

ಕರ್ನಾಟಕ ವಿದ್ಯಾವರ್ಧಕ ಸಂಘವು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಐವರು ಮಹಾಸಾಧಕರಿಗೆ ಗೌರವ ಉಪಾಧ್ಯಕ್ಷರನ್ನಾಗಿ ನೇಮಿಸಿ ತನ್ನ ಘನತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಇವರಲ್ಲಿ ಪ್ರಮುಖರಾದ ಡಾ. ಅಜಿತಪ್ರಸಾದ ಇವರು ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಸಾಧನೆ ಬೆಟ್ಟದಷ್ಟು. ಜೆ.ಎಸ್.ಎಸ್. ಸಂಸ್ಥೆಯ ಮೂಲಕ ಶ್ರೇಷ್ಠ ಗುಣಮಟ್ಟದ ಶಿಕ್ಷಣ ಕೊಡುವದಕ್ಕೆ ಅಪಾರವಾಗಿ ಶ್ರಮಿಸಿದ್ದಾರೆ. ಈಗಲೂ ಅದೇ ದಾರಿಯಲ್ಲಿ ಮುನ್ನಡೆದಿದ್ದಾರೆ. ನಮ್ಮ ಜೈನ ಸಂಸ್ಕೃತಿ ಮತ್ತು ಸಾಹಿತ್ಯ ಟ್ರಸ್ಟಿನ ಗೌರವಾಧ್ಯಕ್ಷರಾದ ಇವರು ಸಾಹಿತ್ಯದ ಚಟುವಟಿಕೆಗಳನ್ನು ಅಭಿವೃದ್ಧಿ ಮಾಡುವಲ್ಲಿ ಸಲಹೆ ಮಾರ್ಗದರ್ಶನ ನೀಡುತ್ತ ಪ್ರೋತ್ಸಾಹಿಸುತ್ತಿದ್ದಾರೆ. ಪ್ರಸ್ತುತ 130 ವರ್ಷಗಳ ಇತಿಹಾಸ ಹೊಂದಿದ ಕರ್ನಾಟಕದ ಹೆಮ್ಮೆಯ ಮತ್ತು ಪ್ರತಿಷ್ಠಿತ ವಿದ್ಯಾವರ್ಧಕ ಸಂಘಕ್ಕೆ ಉಪಾಧ್ಯಕ್ಷರಾಗಿ ನೇಮಕ ಮಾಡಿ ಗೌರವಿಸಿದ್ದು ಸಮಾಜಕ್ಕೆ ಅವರ ಶಿಷ್ಯ ಬಳಗಕ್ಕೆ, ಅಭಿಮಾನಿಗಳಿಗೆ ಬಾರೀ ಸಂತೋಷವನ್ನುಂಟುಮಾಡಿದೆ. ಎಸ್. ಆರ್. ಮಲ್ಲಸಮುದ್ರ

ಮಂಜುನಾಥ ಕಡಹಟ್ಟಿರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಮಂಜುನಾಥ ಕಡಹಟ್ಟಿರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ್‌ ತಾಲೂಕಿನ ಯಲ್ಪರಟ್ಟಿ ನಿವಾಸಿಯಾಗಿರುವ ಮಂಜುನಾಥ ಕಡಹಟ್ಟಿರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಸುಲೋಚನ ಮತ್ತು ರಾಮಪ್ಪ ದಂಪತಿಗಳ ಪುತ್ರ.

ರೋಹಿತ್‌ ರಾಜಗೌಡ ಪಾಟೀಲರವರು ಪಿ.ಎಸ್.ಐ ಆಗಿ ಆಯ್ಕೆ

Article Image

ರೋಹಿತ್‌ ರಾಜಗೌಡ ಪಾಟೀಲರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ ತಾಲೂಕಿನ ಮೊರಬ ಗ್ರಾಮದ ನಿವಾಸಿಯಾಗಿರುವ ರೋಹಿತ್‌ ರಾಜಗೌಡ ಪಾಟೀಲ್‌ರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ರಾಜಗೌಡ ಪಾಟೀಲ ಮತ್ತು ಭಾರತಿ ರಾಜಗೌಡ ಪಾಟೀಲ ದಂಪತಿಗಳ ಪುತ್ರ.

ಅಮಿತ್‌ ಭಗವಂತ್‌ ಹರವಿರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಅಮಿತ್‌ ಭಗವಂತ್‌ ಹರವಿರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ರಾಯಬಾಗ್ ತಾಲೂಕಿನ ಹಾರೊಗೇರಿ ನಿವಾಸಿಯಾಗಿರುವ ಅಮಿತ್‌ ಭಗವಂತ್‌ ಹರವಿರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಭಗವಂತ್‌ ಹರವಿ ಮತ್ತು ಸುನಂದ ಹರವಿ ದಂಪತಿಗಳ ಪುತ್ರ.

ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪಿ.ಎಸ್.ಐ ಆಗಿ ಆಯ್ಕೆ

Article Image

ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪಿ.ಎಸ್.ಐ ಆಗಿ ಆಯ್ಕೆ

ಬೆಳಗಾವಿ ಜಿಲ್ಲೆಯ, ಚಿಕ್ಕೋಡಿ ತಾಲೂಕಿನ ಪಟ್ಟಣಕುಡಿ ನಿವಾಸಿಯಾಗಿರುವ ಅಭಿಷೇಕ್‌ ಅಣ್ಣಾಸಾಹೇಬ್‌ ಸುಲ್ತಾಣ್ಣವರ್‌ರವರು ಪೋಲೀಸ್‌ ಸಬ್‌-ಇನ್‌ಸ್ಪೆಕ್ಟರ್‌ (ಸಿವಿಲ್)‌ ಆಗಿ ಆಯ್ಕೆಯಾಗಿರುತ್ತಾರೆ. ಇವರು ಅಣ್ಣಾಸಾಹೇಬ್‌ ಮತ್ತು ಶೀಲಾ ದಂಪತಿಗಳ ಪುತ್ರ.

ಮೂಡುಬಿದಿರೆ: ಚೌಟರ ಅರಮನೆಯ ಉಷಾ ಜಯವೀರ್ ನಿಧನ

Article Image

ಮೂಡುಬಿದಿರೆ: ಚೌಟರ ಅರಮನೆಯ ಉಷಾ ಜಯವೀರ್ ನಿಧನ

ಮೂಡುಬಿದಿರೆ: ಇಲ್ಲಿನ ಚೌಟರ ಅರಮನೆಯ ದಿ. ಜಯವೀರ್ ಅವರ ಪತ್ನಿ ಮುಳಿಬೆಟ್ಟು ಮನೆತನದ ಉಷಾ ಜಯವೀರ್ (78ವ) ಅವರು ಸೆ.17ರಂದು ಸಾವಿರ ಕಂಬದ ಬಸದಿ ಬಳಿಯ ತಮ್ಮ ಮನೆಯಲ್ಲಿ ನಿಧನರಾದರು. ಇವರು ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

Article Image

ಮೂಡುಬಿದಿರೆ: ಶ್ರೀ ಧವಲಾ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಶ್ರೀ ಧವಲಾ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಇನ್ನರ್ ವೀಲ್ ಕ್ಲಬ್‌ ಮೂಡುಬಿದಿರೆ, ಲಯನ್ಸ್ ಕ್ಲಬ್ ಮೂಡುಬಿದಿರೆ ಮತ್ತು ರೋಟರಿ ಕ್ಲಬ್‌ ಮೂಡುಬಿದಿರೆ ಟೆಂಪಲ್ ಟೌನ್‌ ಸಹಯೋಗದಲ್ಲಿ ರಕ್ತದಾನ ಶಿಬಿರವು ಕಾಲೇಜಿನ ಎ.ವಿ. ಹಾಲ್‌ನಲ್ಲಿ ಸೆ. 17ರಂದು ಜರಗಿತು. ಶಿಬಿರವನ್ನು ಉದ್ಘಾಟಿಸಿದ ಡಿಜೆವಿವಿ ಸಂಘದ ಕಾರ್ಯದರ್ಶಿ ಅಬಿಜಿತ್ ಎಂ. ಶುಭ ಹಾರೈಸಿದರು. ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಜೈನ್ ಅವರು ಮಾತನಾಡಿ ಎಷ್ಟೇ ಹಣವಿದ್ದರೂ ರಕ್ತದ ಉತ್ಪಾದನೆ ಸಾಧ್ಯವಿಲ್ಲ. ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗೆ ರಕ್ತದ ಅವಶ್ಯಕತೆಯನ್ನು ಅರಿತು ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದೆ ಬರಬೇಕಾಗಿರುವುದು ಸಾಮಾಜಿಕ ಜವಾಬ್ದಾರಿಯಾಗಿದೆ ಎಂದರು. ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆಯವರು ಮಾತನಾಡಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಇಂದು ಎಲ್ಲಾ ಕಡೆ ಕಾಣಿಸುತ್ತಿದ್ದು ಆಸ್ಪತ್ರೆ ಸೇರಿರುವ ವ್ಯಕ್ತಿ ಬದುಕಿ ಉಳಿದು ಬರಬೇಕಾದರೆ ರಕ್ತದ ಅಗತ್ಯವಿದೆ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಾರ್ಶ್ವನಾಥ ಅಜ್ರಿಯವರು ಮಾತನಾಡಿ ರಕ್ತದಾನಿ ಒಬ್ಬ ಸೈಲೆಂಟ್ ಹೀರೋ, ಯಾಕೆಂದರೆ ತಾನು ನೀಡಿರುವ ರಕ್ತ ಯಾರಿಗೆ ಸೇರುತ್ತದೆ ಎಂಬುದೂ ಆತನಿಗೆ ತಿಳಿದಿರುವುದಿಲ್ಲ. ಅಂತೆಯೇ ವೈಯಕ್ತಿಕ ಲಾಭ, ಅಭಿಲಾಷೆಗಳೂ ರಕ್ತದಾನದ ಸಂದರ್ಭ ಆತನಲ್ಲಿ ಇರುವುದಿಲ್ಲ ಎಂದರು. ಟೆಂಪಲ್ ಟೌನ್‌ ರೋಟರಿ ಅಧ್ಯಕ್ಷ ಹರೀಶ್ ಎಂ.ಕೆ., ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಕ್ಷತಾ ನಾಯಕ್, ವೆನ್ಲಾಕ್ ಆಸ್ಪತ್ರೆಯ ಬ್ಲಡ್‌ ಬ್ಯಾಂಕ್‌ನ ವಿದ್ಯಾ, ಆಂಟನಿ, ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಕ ಖಾದರ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮೂರೂ ಕ್ಲಬ್‌ಗಳ ಕಾರ್ಯದರ್ಶಿ ಮತ್ತು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಎನ್ನೆಸ್ಸೆಸ್ ಅಧಿಕಾರಿ ಮಲ್ಲಿಕಾ ರಾವ್ ಸ್ವಾಗತಿಸಿದರು. ಶ್ರೇಯಾ ನಿರೂಪಿಸಿದ ಕಾರ್ಯಕ್ರಮದಲ್ಲಿ ರಶ್ಮಿ ವಂದಿಸಿದರು.

ತೌಳವ ಇಂದ್ರ ಸಮಾಜ(ರಿ)ದಿಂದ ಧರ್ಮಸ್ಥಳದಲ್ಲಿ ಶಾಂತಿ ಚಕ್ರ ಆರಾಧನೆ ಮತ್ತು ಲಕ್ಷಾಧಿಕ ಜಾಪ್ಯಮಂತ್ರ ಪಠನೆ

Article Image

ತೌಳವ ಇಂದ್ರ ಸಮಾಜ(ರಿ)ದಿಂದ ಧರ್ಮಸ್ಥಳದಲ್ಲಿ ಶಾಂತಿ ಚಕ್ರ ಆರಾಧನೆ ಮತ್ತು ಲಕ್ಷಾಧಿಕ ಜಾಪ್ಯಮಂತ್ರ ಪಠನೆ

ತೌಳವ ಇಂದ್ರ ಸಮಾಜದ ಸದಸ್ಯರಿಂದ ಲೋಕ ಶಾಂತ್ಯರ್ಥವಾಗಿ ಧರ್ಮಸ್ಥಳದ ಭ l ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶಾಂತಿ ಚಕ್ರ ಆರಾಧನೆ, ಸಾಮೂಹಿಕ ಜಾಪ್ಯಾ ಮಂತ್ರ ಹಾಗೂ ಪೂಜಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಬೆಳಗ್ಗೆ 7 ಗಂಟೆಗೆ ಆರಾಧನಾ ಪೂಜಾ ಕಾರ್ಯಕ್ರಮಗಳು ಪ್ರಾರಂಭಗೊಂಡವು,ತದನಂತರ ಲಕ್ಷಾಧೀಕ ಶಾಂತಿ ಮಂತ್ರ ಪಠಣ ಕಾರ್ಯ ಸಾಮೂಹಿಕವಾಗಿ ಮಾಡಲಾಯಿತು. ನೆರೆದಿರುವ ಸುಮಾರು ಇನ್ನೂರಕ್ಕೂ ಮಿಕ್ಕಿದ ಸಮಾಜ ಬಾಂಧವರುಗಳು ಬೇರೆಬೇರೆ ಊರುಗಳಿಂದ (ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ) ಬಂದು ಸಕ್ರಿಯವಾಗಿ ಭಾಗವಹಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಬೆಂಬಲವನ್ನು ನೀಡಿದರು. ನಂತರ ನಡೆದ ಸರಳ ಸಮಾರಂಭದಲ್ಲಿ ಸಮಾಜ ಬಾಂಧವರಿಂದ ಸನ್ಮಾನ ಹಾಗೂ ಬೇರೆ ಬೇರೆ ಬಸದಿಗಳ ಪ್ರಸಾದ ಸ್ವೀಕರಿಸಿ ಮಾತನಾಡಿದ ಪೂಜ್ಯ ಖಾವಂದರು "ಇಂದ್ರ ಸಮಾಜದವರು ಯಾವತ್ತೂ ನಮ್ಮೊಡನೆ ಇದ್ದು ಕ್ಷೇತ್ರದ ಎಲ್ಲಾ ಕಾರ್ಯಗಳಿಗೆ ಬೆಂಬಲ ನೀಡುತ್ತಾರೆ. ಹಿರಿಯರ ಪುರೋಹಿತರ ಆಶೀರ್ವಾದ ಸದಾ ಸಕಾರಾತ್ಮಕವಾಗಿರಲಿ" ಎಂದು ಎಲ್ಲರನ್ನು ಅಭಿನಂದಿಸಿದರು. ಹೇಮಾವತಿ ಹೆಗ್ಗಡೆಯವರು ಮತ್ತು ಹರ್ಷೇಂದ್ರ ಕುಮಾರ್ ಹೆಗ್ಗಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಬೆಳ್ತಂಗಡಿ ಬಸದಿಗೆ ಭೇಟಿ

Article Image

ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಬೆಳ್ತಂಗಡಿ ಬಸದಿಗೆ ಭೇಟಿ

ಉಜಿರೆ: ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಸೆ. 21 ರಂದು ಭಾನುವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥ ಕ್ಷೇತ್ರಕ್ಕೆ ಆಗಮಿಸಲಿದ್ದು ಕೀರ್ತಿಶೇಷ ಕಿನ್ಯಮ್ಮ ಯಾನೆ ಗುಣವತಿಅಮ್ಮ ಸ್ಮಾರಕ ಟ್ರಸ್ಟ್ ಆಶ್ರಯದಲ್ಲಿ 700 ವಿದ್ಯಾರ್ಥಿಗಳಿಗೆ 25 ಲಕ್ಷ ರೂ. ವಿದ್ಯಾರ್ಥಿ ಪ್ರೋತ್ಸಾಹಧನ ವಿತರಿಸಲಿದ್ದಾರೆ ಎಂದು ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್ ತಿಳಿಸಿದ್ದಾರೆ. ಬಸದಿಯ ಆಡಳಿತ ಮೊಕ್ತೇಸರರಾಗಿದ್ದ ಕೆಲ್ಲಗುತ್ತು ಸಬ್ರಬೈಲು ಕಿನ್ಯಮ್ಮ ಯಾನೆ ಗುಣವತಿಅಮ್ಮನವರ ವಾರ್ಷಿಕ ಸ್ಮರಣಾರ್ಥ ಪೂರ್ವಾಹ್ನ ಗಂಟೆ ಏಳರಿಂದ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ 108 ಕಲಶಾಭಿಷೇಕ, ಮೂರು ಬಸದಿಗಳಲ್ಲಿ ನವಕಲಶಾಭಿಷೇಕ, ಮಹಾಪೂಜೆ ಮತ್ತು ಮಹಾಮಾತೆ ಪದ್ಮಾವತಿ ಅಮ್ಮನವರಿಗೆ ಅಲಂಕಾರಪೂಜೆ ನಡೆಯಲಿದೆ. ಅಪರಾಹ್ನ ಮೂರು ಗಂಟೆಯಿಂದ ಪೂಜ್ಯ ಸ್ವಾಮೀಜಿಯವರಿಂದ ವಿದ್ಯಾರ್ಥಿ ಪ್ರೋತ್ಸಾಹಧನ ವಿತರಣೆ ನಡೆಯಲಿದೆ. ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್ ಅಧ್ಯಕ್ಷತೆ ವಹಿಸುವರು.

ಶಟಲ್ ಬ್ಯಾಡ್ಮಿಂಟನ್: ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ ಎಂ.ವಿ. ರಾಜ್ಯಮಟ್ಟಕ್ಕೆ ಆಯ್ಕೆ

Article Image

ಶಟಲ್ ಬ್ಯಾಡ್ಮಿಂಟನ್: ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ ಎಂ.ವಿ. ರಾಜ್ಯಮಟ್ಟಕ್ಕೆ ಆಯ್ಕೆ

ಮೂಡುಬಿದಿರೆ: ಮಂಗಳೂರಿನ ಫಾದರ್ ಮುಲ್ಲರ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪದವಿ ಪೂರ್ವ ಕಾಲೇಜಿನ ಮನಸ್ವಿ ಎಂ.ವಿ. ವಿನ್ನರ್ ಆಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮೈಸೂರಿನ ವಿಜಯನಗರದ ವೀರೇಂದ್ರ ಕುಮಾರ್‌ ಎಂ. ಎನ್‌. ಮತ್ತು ಅನುಪಮ ಎಸ್.‌ ಇವರ ಪುತ್ರಿ.

ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನಾ ಸಮಾರಂಭ

Article Image

ಧರ್ಮಸ್ಥಳದಲ್ಲಿ 27 ನೇ ವರ್ಷದ ಭಜನಾ ಕಮ್ಮಟ: ಉದ್ಘಾಟನಾ ಸಮಾರಂಭ

ಉಜಿರೆ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಭಾನುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ 27 ನೇ ವರ್ಷದ ಭಜನಾ ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು. ಭಜನೆಯಿಂದ ಸುಲಭದಲ್ಲಿ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು, ಭಜನೆಯಿಂದ ಜನಜಾಗೃತಿ ಉಂಟಾಗಿ ಎಲ್ಲರೂ ಸಮಾನರಾಗಿ, ಗುರು-ಹಿರಿಯರಿಂದ ಮಾರ್ಗದರ್ಶನ, ಪ್ರೇರಣೆ ಪಡೆದು ದೃಢಭಕ್ತಿ ಮತ್ತು ಪರಿಶುದ್ಧ ಮನಸಿನಿಂದ ಭಜನೆ ಮಾಡಿದಾಗ ಮಾನಸಿಕ ಶಾಂತಿ, ನೆಮ್ಮದಿ ಸಿಗುತ್ತದೆ. ದಾಸರ ಪದಗಳು, ಭಾಗ್ಯದ ಲಕ್ಷ್ಮೀ ಬಾರಮ್ಮ ಮೊದಲಾದ ಭಜನೆಗಳು ನಮಗೆ ಸಾರ್ಥಕ ಜೀವನದ ಪಾಠವನ್ನು ಕಲಿಸುತ್ತವೆ ಎಂದು ಡಾ. ಮೋಹನ ಆಳ್ವ ಹೇಳಿದರು. ಮಾಣಿಲದ ಮೋಹನದಾಸ ಸ್ವಾಮೀಜಿ ಶುಭಶಂಸನೆ ಮಾಡಿ, ಭಜನಾ ತರಬೇತಿ ಪಡೆದವರು ತಮ್ಮ ಮಕ್ಕಳಿಗೂ ಭಜನೆಯ ಮೂಲಕ ಉತ್ತಮ ಸಂಸ್ಕಾರ ನೀಡಬೇಕು. ಭಜನೆ ಮಾಡುವಾಗ ನಿತ್ಯವೂ ಶಿವಪಂಚಾಕ್ಷರಿ ಪಠಣ ಮಾಡಬೇಕು ಎಂದು ಸಲಹೆ ನೀಡಿದರು. ಅಧ್ಯಕ್ಷತೆ ವಹಿಸಿದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಭಜನಾ ತರಬೇತಿ ಪಡೆದವರು ಶಿಸ್ತು, ಸಮಯಪಾಲನೆ, ಸ್ವಚ್ಛತೆಯೊಂದಿಗೆ ನಾಯಕತ್ವಗುಣವನ್ನೂ ಬೆಳೆಸಿಕೊಂಡು ಪ್ರಗತಿಯ ರೂವಾರಿಗಳಾಗಬೇಕು. ಸಂಸ್ಕೃತಿ ಪ್ರಸಾರದ ರಾಯಭಾರಿಗಳಾಗಿ ಎಲ್ಲರನ್ನೂ ನಮ್ಮವರೇ ಎಂದು ಭಾವಿಸಿ ವಿಶ್ವಮಾನವರಾಗಿ ಸಮಾಜಸೇವೆ ಮಾಡಬೇಕು. ನೃತ್ಯ ಭಜನೆಗೂ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಭಜನಾ ಕಮ್ಮಟದ ಕಾಯದರ್ಶಿ ಎ.ವಿ. ಶೆಟ್ಟಿ ವರದಿ ಸಾದರ ಪಡಿಸಿದರು. ಭಜನಾಕಮ್ಮಟದ ಸಂಚಾಲಕ ಸುಬ್ರಹ್ಮಣ್ಯಪ್ರಸಾದ್ ಪ್ರಾಸ್ತಾವಿಕವಾಗಿ ಮಾತುಗಳೊಂದಿಗೆ ಸ್ವಾಗತಿಸಿದರು. ನಿವೃತ್ತ ಮುಖ್ಯ ಶಿಕ್ಷಕ ಪದ್ಮರಾಜ್ ಧನ್ಯವಾದವಿತ್ತರು. ಧರ್ಮಸ್ಥಳದ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪದ್ಮಶ್ರೀ ಕಾರ್ಯಕ್ರಮ ನಿರ್ವಹಿಸಿದರು. 111 ಪುರುಷರು ಹಾಗೂ 71 ಮಹಿಳೆಯರು ಸೇರಿದಂತೆ ಒಟ್ಟು 182 ಶಿಬಿರಾರ್ಥಿಗಳು ಕಮ್ಮಟದಲ್ಲಿ ಭಾಗವಹಿಸುತ್ತಿದ್ದಾರೆ.

ಡಾ. ಅಪ್ಪಣ್ಣ ಹಂಜೆ ಅವರಿಗೆ ಈಶ್ವರಜ್ಞಾನ ಗುರುರತ್ನ ಪ್ರಶಸ್ತಿ

Article Image

ಡಾ. ಅಪ್ಪಣ್ಣ ಹಂಜೆ ಅವರಿಗೆ ಈಶ್ವರಜ್ಞಾನ ಗುರುರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ.) ಗದಗ ಗ್ರಾಮೀಣ ವಿಭಾಗ ಮತ್ತು ಹುಲಕೋಟಿಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ‘ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಹುಲಕೋಟಿಯ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಮತ್ತು ಪ್ರಾಧ್ಯಾಪಕ ಹಾಗೂ ಎನ್.ಎಸ್.ಎಸ್. ಘಟಕದ ಸಂಯೋಜಕ ಡಾ. ಅಪ್ಪಣ್ಣ ಹಂಜೆ ಅವರನ್ನು ‘ಈಶ್ವರಜ್ಞಾನ ಗುರುರತ್ನ’ ಪ್ರಶಸ್ತಿಯಿಂದ ಗೌರವಿಸಿವೆ. ಇವರು 20 ವರ್ಷಗಳ ಬೋಧನಾ ಅನುಭವ ಹೊಂದಿದ್ದು, ಪ್ರಾಚೀನ ಸಮಾಜ, ಧರ್ಮ, ಇತಿಹಾಸ, ಸಂಸ್ಕೃತಿ, ವಾಸ್ತುಕಲೆ, ಶಿಲ್ಪಕಲೆ, ಶಾಸನಗಳು, ಸಾಹಿತ್ಯ ಮುಂತಾದ ಕ್ಷೇತ್ರಗಳಲ್ಲಿ ಸಂಶೋಧನ ಅಧ್ಯಯನ ಕೈಗೊಂಡು 12ಕ್ಕೂ ಹೆಚ್ಚು ಕೃತಿಗಳು, 150ಕ್ಕೂ ಹೆಚ್ಚು ಸಂಶೋಧನ ಲೇಖನಗಳನ್ನು ಪ್ರಕಟಿಸಿದ್ದಾರೆ. ಬೀದರ ಜಿಲ್ಲೆಯ ಜೈನ ಶಾಸನಗಳು, ಲಕ್ಕುಂಡಿಯ ಬಸದಿಗಳು, ಅಣ್ಣಿಗೇರಿಯ ಜೈನ ದೇಸಗತಿ ಮನೆತನ, ಬೆಳಗಾವಿಯ ಕಮಲ ಬಸದಿ, ಕರ್ನಾಟಕದ ಬಸದಿಗಳು, ಶಾಸನ ಸಾಹಿತ್ಯದಲ್ಲಿ ಜೀವನ ಮೌಲ್ಯ ಕೃತಿಗಳು ವಸ್ತುನಿಷ್ಠ ಸಂಶೋಧನ ಅಧ್ಯಯನ ಗೌರವಕ್ಕೆ ಪಾತ್ರವಾಗಿವೆ. ಡಾ. ಅಪ್ಪಣ್ಣ ಅವರು ಗದಗ ಜಿಲ್ಲೆಯ ದೇಸಗತಿ ಮನೆತನಗಳು, ದಾಖಲೆ ಪತ್ರಗಳ ಶೋಧನೆ ಮತ್ತು ಸಂರಕ್ಷಣೆ, ಕರ್ನಾಟಕ ಏಕೀಕರಣ ಚಳುವಳಿ ಹಾಗೂ ಐತಿಹಾಸಿಕ ದಾಖಲೆಗಳು ಮತ್ತು ಛಾಯಾಚಿತ್ರಗಳ ಪ್ರದರ್ಶನ ಸೇರಿದಂತೆ ಹಲವು ವಿಚಾರ ಸಂಕಿರಣ ಮತ್ತು ಕಾರ್ಯಾಗಾರಗಳನ್ನು ಏರ್ಪಡಿಸಿದ್ದು, ಕೆಲವು ಸಂಸ್ಮರಣ ಕೃತಿಗಳು, ನಿಯತಕಾಲಿಕೆಗಳು, ಪತ್ರಿಕೆಗಳ ಸಂಪಾದಕ ಮಂಡಳಿ ಸದಸ್ಯರಾಗಿ, ಕರ್ನಾಟಕ ಪುರಾತತ್ವ ಮತ್ತು ಸಾಹಿತ್ಯ ಪರಿಷತ್ತು, ಗದಗ ಜಿಲ್ಲಾ ದಿಗಂಬರ ಜೈನ ಸಂಘ, ಹಂಪಿ ಕನ್ನಡ ವಿಶ್ವವಿದ್ಯಾಲಯದ ಜೈನ ಸಾಹಿತ್ಯ ಸಂಸ್ಕೃತಿ ಅಧ್ಯಯನ ಕೇಂದ್ರಗಳ ಸಲಹಾ ಸಮಿತಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಮಾನ್ಯತಾ ಕೇಂದ್ರ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಾಮಾನಾ ಸಂಶೋಧನ ಕೇಂದ್ರದಲ್ಲಿ ಪಿಎಚ್.ಡಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಇವರು ಸಂಶೋಧನೆ, ಅಧ್ಯಯನ, ಪ್ರಕಟಣೆ ಕ್ಷೇತ್ರಗಳಲ್ಲಿ ಕೈಗೊಳ್ಳುತ್ತಿರುವ ಸಾಧನೆ, ಕೊಡುಗೆಗಳಿಗೆ ನಾಡಿನ ಹಲವು ಸಂಘ-ಸಂಸ್ಥೆಗಳಿಂದ ಶ್ರೀ ಹುಯಿಲಗೋಳ ನಾರಾಯಣರಾವ ಸ್ಮಾರಕ ಪ್ರಶಸ್ತಿ, ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿ ಪ್ರಶಸ್ತಿ, ಆಚಾರ್ಯ 108 ಶ್ರೀ ಬಾಹುಬಲಿ ಕನ್ನಡ ಸಾಹಿತ್ಯ ಪ್ರಶಸ್ತಿ, ಜಯಲಕ್ಷ್ಮಮ್ಮ ಬಿ.ಎಸ್. ಸಣ್ಣಯ್ಯ ದತ್ತಿ ಪ್ರಶಸ್ತಿ, ಆದರ್ಶ ಜೈನ ಯುವ ಪ್ರಶಸ್ತಿ, ಜ್ಞಾನಶ್ರೀ ಪ್ರಶಸ್ತಿ, ಬಾಹುಬಲಿ ಸಿದ್ಧಶ್ರೀ ಪ್ರಶಸ್ತಿ, ಜ್ಞಾನೇಶ್ವರ ಆದರ್ಶ ಶಿಕ್ಷಕ ಪ್ರಶಸ್ತಿ, ಬೆಳ್ಳಿ ಸಂಭ್ರಮ ಪ್ರಶಸ್ತಿ, ಸಾಹಿತ್ಯ ಸಿರಿ ಪ್ರಶಸ್ತಿಗಳ ಗೌರವಕ್ಕೆ ಪಾತ್ರರಾಗಿದ್ದಾರೆ. ಇವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಕಾರ್ಕಳ: ದತ್ತಿನಿಧಿ ಪ್ರಶಸ್ತಿ ಪ್ರದಾನ ಶ್ರೀ ಬಾಹುಬಲಿ ಶ್ರಾವಿಕಾಶ್ರಮ ದಾನಶಾಲೆ

Article Image

ಕಾರ್ಕಳ: ದತ್ತಿನಿಧಿ ಪ್ರಶಸ್ತಿ ಪ್ರದಾನ ಶ್ರೀ ಬಾಹುಬಲಿ ಶ್ರಾವಿಕಾಶ್ರಮ ದಾನಶಾಲೆ

2025 - 26ನೇ ಸಾಲಿನಲ್ಲಿ ಜರುಗಿದ ಧಾರ್ಮಿಕ ಪಾಠ ಪರೀಕ್ಷೆ, ಶೈಕ್ಷಣಿಕದಲ್ಲಿ ಉನ್ನತ ಸ್ಥಾನ ಹೊಂದಿದ, ನಾಯಕತ್ವ ಗುಣವುಳ್ಳ, ಹೊಂದಾಣಿಕೆ ಹೊಂದಿದ ಒಬ್ಬ ವಿದ್ಯಾರ್ಥಿನಿಯನ್ನು ಹೇಮಾವತಿ ಅಮ್ಮನವರ ನೇತೃತ್ವದ ಆಡಳಿತ ಮಂಡಳಿಯ ಸದಸ್ಯರು ಆಯ್ಕೆ ಮಾಡಿ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತದೆ.ಈ ಪ್ರಯುಕ್ತ ಶ್ರೀ ಬಾಹುಬಲಿ ಶ್ರಾವಿಕಾಶ್ರಮ ದಾನ ಶಾಲೆ, ಕಾರ್ಕಳ ಇಲ್ಲಿಯ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಪದ್ಮಮಾಲಿನಿ ಕೆ.ಎ., ಇಡಕಿಣಿ, ಕಳಸ ಇವರಿಗೆ ಶ್ರವಣಬೆಳಗೊಳ ಪ.ಪೂ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಧತ್ತಿನಿಧಿ ಪ್ರಶಸ್ತಿ ನೀಡಲಾಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾದ ಅಜಿತ್ ಕುಮಾರ್ ಕೊಕ್ರಡಿ, ಆಶ್ರಮದ ಆಡಳಿತ ಮಂಡಳಿಯ ಮಾಲತಿ ವಸಂತ್ ರಾಜ್, ಸುಮಾಲಿನಿ ವಿಜಯ್ ಕುಮಾರ್ ಅಜ್ರಿ, ಕಾರ್ಯದರ್ಶಿಗಳಾದ ಶಿಶುಪಾಲ್ ಪುವಣಿ ಹಾಗೂ ಜಯಲಕ್ಷ್ಮಿ ಅಜಿತ್ ಕುಮಾರ್ ರವರು, ಕಾರ್ಕಳ ಜೈನಮಠದ ವ್ಯವಸ್ಥಾಪಕರಾದ ಧನಕೀರ್ತಿ ಕಡಂಬರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವೇದಿಕೆಯಲ್ಲಿರುವವರು ಪದ್ಮಮಾಲಿನಿಯವರಿಗೆ, ದತ್ತಿನಿಧಿ ಪ್ರಶಸ್ತಿ ಪತ್ರ, ಶಾಲು, ಹಾರ ಮತ್ತು ನಗದು ಬಹುಮಾನ ನೀಡಿ ಗೌರವಿಸಲಾಯಿತು. ಹಾಗೆಯೇ ದಶಲಕ್ಷಣ ಪರ್ವದ ಆರಂಭದಂದು ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿ ದಾನಶಾಲೆ, ಕಾರ್ಕಳ ಇವರ ಪಾವನ ಸಾನಿಧ್ಯದಲ್ಲಿ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟನೆಗೊಂಡಿತು ಹಾಗೆಯೇ ಮಂಗಲ ಪ್ರವಚನವನ್ನು ದಯಪಾಲಿಸಿದರು. ಶೈಕ್ಷಣಿಕ ಮತ್ತು ಧಾರ್ಮಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪೂಜ್ಯ ಸ್ವಾಮೀಜಿಯವರಿಂದ ನೀಡಲಾಯಿತು ಈ ಸುಸಂದರ್ಭದಲ್ಲಿ ಪರಮಪೂಜ್ಯ 108 ಮುನಿಶ್ರೀ ಮಹಿಮಾ ಸಾಗರ ಮುನಿ ಮಹಾರಾಜರು ಮಕ್ಕಳ ಮೇಲಿನ ಅಭಿಮಾನದಿಂದ ಹತ್ತು ದಿನದ ಭೋಜನ ವ್ಯವಸ್ಥೆಯನ್ನು ಮಾಡಿಸಿರುತ್ತಾರೆ.

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

Article Image

ದಿಗಂಬರ್ ಜೈನ್ ಮಹಾಸಮಿತಿ ದೆಹಲಿಯ ಕಾರ್ಯಾಧ್ಯಕ್ಷರ ಭೇಟಿ

ದಿಗಂಬರ್ ಜೈನ್ ಮಹಾಸಮಿತಿ, ದೆಹಲಿ ಇದರ ಕಾರ್ಯಾಧ್ಯಕ್ಷರು ಬಿಪಿನ್ ಸುಮಾರ್ ಜೈನ್ ಸರಫ್, ದಿನಾಂಕ 12.09.2025ನೇ ಶುಕ್ರವಾರ ಹಾಸನಕ್ಕೆ ಭೇಟಿ ನೀಡಿದರು. ಕಾರ್ಯಕ್ರಮವನ್ನು ಹಾಸನದ ದೆಹಲಿ ದಿಗಂಬರ ಜೈನ್ ಸಮಿತಿಯ ಸಂಚಾಲಕರಾದ ಹೆಚ್.ಎನ್‌., ಅಭಿನಂದನ್‌ರವರು ಕಾರ್ಯಕ್ರಮವನ್ನು ಆಯೋಜಿಸಿದ್ದರು. ಜೈನ ಮಹಾಸಮಿತಿಯ ಕಾರ್ಯಾಧ್ಯಕ್ಷರು ಸಮಿತಿಯು 50 ವರ್ಷಗಳ ಹಿಂದೆ 1976ರಲ್ಲಿ ಸ್ಥಾಪಿತವಾಗಿದ್ದು ಶ್ರೀ 108 ವಿದ್ಯಾನಂದ ಮುನಿಮಹರಾಜರ ಆಶೀರ್ವಾದದಿಂದ ಪ್ರಾರಂಭವಾಗಿರುತ್ತದೆ. ಸಮಿತಿಯ ಸಮನ್ವಯ ಸದ್ಭಾವನೆ ಮತ್ತು ಸಂಘಟನೆಯ ಪ್ರತಿಬಿಂಬವಾಗಿರುತ್ತದೆ. ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಜೈನ ಸಾಮಾಜಿಕ ಕಲ್ಯಾಣ ಮತ್ತು ಸಾರ್ವಜನಿಕ ಕಲ್ಯಾಣ ಕಾರ್ಯಗಳನ್ನು ಹಂಚಿಕೊಳ್ಳು ಸಮಾಜದ ಹಿತದೃಷ್ಠಿಯಿಂದ ಸರಪಳಿ ಸಧಿಸಬಹುದಾಗಿರುತ್ತದೆ. ಸಮಾಜದ ಬಡವರಿಗೆ, ಮಕ್ಕಳಿಗೆ, ಅವಶ್ಯಕತೆ ಇರುವ ಸವಲತ್ತುಗಳನ್ನು ಪೂರೈಸಲಾಗುತ್ತದೆ. ಹಾಸನದ ಜೈನ ಬಾಂಧವರು ಈ ಸಂಸ್ಥೆಯ ಅಜೀವ ಸದಸ್ಯತ್ವ ಪಡೆದುಕೊಳ್ಳಬೇಕೆಂದು ವಿನಂತಿಸಿದರು. ಹಾಸನ ಜೈನ ಸಂಘದ ಅಧ್ಯಕ್ಷರಾದ ಹೆಚ್‌.ಬಿ. ಶಾಂತೀಶ್, ಕರ್ನಾಟಕ ಜೈನ ಅಸೋಸಿಯೇಷನ್‌ ಹಾಸನದ ಪ್ರತಿನಿಧಿ ಹೆಚ್.ಬಿ.ನಾಗೇಂದ್ರಯ್ಯ, ಜೈನ ಸಹಕಾರ ಮಂಡಳಿಯ ಅಧ್ಯಕ್ಷರಾದ ಸುಕುಮಾ‌ ಮತ್ತು ಮಹಾವೀರ ಭವನದ ಅಧ್ಯಕ್ಷರಾದ ಎಂ. ಧನ್‌ ಪಾಲ್ ಮತ್ತು ಕಾಳಲಾದೇವಿ ಮಹಿಳಾ ಸಮಾಜದ ಅಧ್ಯಕ್ಷರಾದ ಸುಪ್ರಭ ಅಭಿನಂದನ್ ಇವರುಗಳು ಮಾತನಾಡಿ ಸಮಿತಿಯ ಸದಸ್ಯರಾಗಿ ಬೆಂಬಲಿಸುವುದಾಗಿ ತಿಳಿಸಿದರು. ಹಾಸನ ವಿಭಾಗಕ್ಕೆ ಹೆಚ್.ಎನ್. ಅಭಿನಂದನ್‌ ರವರು ಸಂಚಾಲಕ ಸಂರಕ್ಷಕರಾಗಿರುತ್ತಾರೆ ಎಂದು ಕಾರ್ಯಾಧ್ಯಕ್ಷರು ತಿಳಿಸಿದರು. ಹಾಸನದ ಬಾಹುಬಲಿ ಭವನದಲ್ಲಿ ಜೈನ ಸಮಾಜದ ಪ್ರಮುಖರು ಭಾಗವಹಿಸಿದ್ದರು. ಸಭೆಯು ರಂಜಿತ ಸಮಂತ್ ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಸಂಚಾಲಕರಾದ ಅಭಿನಂದನ್‌ರವರು ಸಭೆಗೆ ಆಗಮಿಸಿದ್ದ ಅತಿಥಿಗಳು ಮತ್ತು ಗಣ್ಯರಿಗೆ ಸ್ವಾಗತವನ್ನು ಕೋರಿದರು. ಅಭಿನಂದನ್‌ರವರು ಆಗಮಿಸಿದ್ದ ಅತಿಥಿಗಳಿಗೆ ಗೌರವ ಸಮರ್ಪಿಸಿದರು. ವಂದನಾರ್ಪಣೆ ಮಾಡಿದರು.

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

Article Image

ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭ

ಮಂಗಳೂರಿನ ಧವಳ ಕೋ-ಆಪರೇಟಿವ್‌ ಸೊಸೈಟ (ರಿ.), ಇದರ ಆಶ್ರಯದಲ್ಲಿ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ 300 ವರ್ಷಗಳ ಮೊದಲೇ ಸ್ವಾತಂತ್ರ್ಯದ ವೀರ ಕಹಳೆಯನ್ನು ಮೊಳಗಿಸಿ, ವಸಾಹತುಶಾಹಿಗಳ ಆಕ್ರಮಣವನ್ನು ನಾಲ್ಕು ದಶಕಗಳಕಾಲ ಹಿಮ್ಮೆಟ್ಟಿದ ಮೊಟ್ಟಮೊದಲ ಭಾರತೀಯ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ! ಅಚಲ ಧೈರ್ಯದ ಕಾರಣಕ್ಕೆ ಅವಳನ್ನು 'ಅಭಯ ರಾಣಿ' ರಾಣಿ ಅಬ್ಬಕ್ಕನ 500ನೇ ಜನ್ಮ ಜಯಂತಿ ಸಂಸ್ಮರಣಾ ಸಮಾರಂಭವು ಮಂಗಳೂರಿನ ಜೈನ್ ಬೋರ್ಡಿಂಗ್ ಸಿದ್ಧಾರ್ಥ ಸಭಾಭವನದಲ್ಲಿ ಸೆ. 21ರಂದು ಭಾನುವಾರ, ಸಂಜೆ 4.30ಕ್ಕೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

Article Image

ಅತ್ಯಾಧುನಿಕ ನೇತ್ರ ಚಿಕಿತ್ಸೆ ಧಾರವಾಡದಲ್ಲಿ

ಎಸ್‌ಡಿಎಮ್ ವಿಶ್ವವಿದ್ಯಾಲಯ ಧಾರವಾಡದ, ಎಸ್‌ಡಿಎಮ್ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನೇತ್ರ ಚಿಕಿತ್ಸಾ ವಿಭಾಗದಲ್ಲಿ 01.09.2025 ರಂದು ಅತ್ಯಾಧುನಿಕ ಕೋರ್ನಿಯಲ್ ಟೊಪೋಗ್ರಾಫಿ ಯಂತ್ರ ಹಾಗೂ ಸ್ಪೆಕ್ಯುಲರ್ ಮೈಕ್ರೋಸ್ಕೋಪ್ ಉಪಕರಣಗಳನ್ನು ಮಾನ್ಯ ಉಪ ಕುಲಪತಿಗಳಾದ ಹಾಗೂ ಪ್ರಸಿದ್ಧ ಪ್ಲಾಸ್ಟಿಕ್ ಸರ್ಜನ್ ಡಾ. ನಿರಂಜನ್ ಕುಮಾರ್ ಅವರು ಉದ್ಘಾಟಿಸಿದರು. ನೇತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥೆ ಡಾ. ಅನುಪಮಾ ಎಸ್. ದೇಸಾಯಿ ಅವರು ಉಪಕರಣಗಳ ಉಪಯೋಗಗಳನ್ನು ವಿವರಿಸುತ್ತಾ ಕೋರ್ನಿಯಾ ಮೇಲ್ಮೆöÊ ನಿಖರ ನಕ್ಷೆ ತಯಾರಿಸಲು ನೆರವಾಗುತ್ತವೆ. ಕ್ಯಾರಟೊಕೋನಸ್, ಅಸ್ಟಿಗ್ಮಾಟಿಸಂ, ರೆಫ್ರಾಕ್ಟಿವ್ ಶಸ್ತ್ರಚಿಕಿತ್ಸೆ, ಡ್ರೈ ಐ ರೋಗಗಳ ತಪಾಸಣೆಗೆ ಸಹಾಯಕವಾಗುತ್ತವೆ” ಎಂದರು ತಿಳಿಸಿದರು. ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ ಮಾತನಾಡುತ್ತ ಈ ಸೌಲಭ್ಯದಿಂದ ಧಾರವಾಡ ಹಾಗೂ ಸುತ್ತಮುತ್ತಲಿನ ಜನತೆಗೆ ಜಾಗತಿಕ ಮಟ್ಟದ ನೇತ್ರ ಚಿಕಿತ್ಸಾ ಸೇವೆ ಲಭ್ಯವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪದ್ಮಲತಾ ನಿರಂಜನ್, ಆಡಳಿತ ನಿರ್ದೇಶಕರಾದ ಸಾಕೇತ್ ಶೆಟ್ಟಿ, ಹಣಕಾಸು ಅಧಿಕಾರಿಗಳಾದ ವಿ.ಜಿ. ಪ್ರಭು, ಎಸ್.ಡಿ.ಎಮ್. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಸಿ.ಎಮ್. ಶೆಟ್ಟರ್, ವೈದ್ಯಕೀಯ ಅಧೀಕ್ಷಕರಾದ ಡಾ. ಕಿರಣ್ ಹೆಗಡೆ, ಉಪ ವೈದ್ಯಕೀಯ ಅಧೀಕ್ಷಕರಾದ ಡಾ. ಮಗ್ದುಮ್ ಕಿಲ್ಲೇದಾರ್, ಪ್ರಾಂಶುಪಾಲರಾದ ಡಾ. ವಿಜಯ್ ಕುಲಕರ್ಣಿ, ಡಾ. ಶಂಕರಗೌಡಾ ಪಾಟೀಲ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Article Image

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

ಉಜಿರೆ: ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಶನಿವಾರ ಚಂದನ ಷಷ್ಠಿ ನೋಂಪಿ ವಿಧಾನದ ಉದ್ಯಾಪನಾ ಕಾರ್ಯಕ್ರಮ ವಿಧಿ-ವಿಧಾನಗಳೊಂದಿಗೆ ಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಮೂರೂ ಬಸದಿಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಬಳಿಕ ಸಾಮೂಹಿಕ ಪಂಚನಮಸ್ಕಾರ ಮಂತ್ರ ಪಠಣದ ಬಳಿಕ ಸಾಮೂಹಿಕ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಚಂದ್ರಪ್ರಭ ತೀರ್ಥಂಕರರ ಪೂಜೆ, ಭಗವಾನ್ ಶಾಂತಿನಾಥ ಸ್ವಾಮಿ ಪೂಜೆ, ನವದೇವತೆಗಳ ಪೂಜೆ, ಪಂಚಪರಮೇಷ್ಠಿಗಳ ಪೂಜೆ, ಕ್ಷೇತ್ರಪಾಲಪೂಜೆ, ಪದ್ಮಾವತಿ ದೇವಿಪೂಜೆ, ಬ್ರಹ್ಮಯಕ್ಷ ಪೂಜೆ, ಭಗವಾನ್ ಬಾಹುಬಲಿ ಸ್ವಾಮಿ ಪೂಜೆ ಮತ್ತು ಶ್ರುತ ಪೂಜೆ ನಡೆಸಲಾಯಿತು. 108 ಮಂತ್ರಪುಷ್ಟ ಅರ್ಚನೆ ಬಳಿಕ ಜಯಮಾಲಾ ಅರ್ಘ್ಯ ಅರ್ಪಿಸಲಾಯಿತು. ಬಸದಿಯ ಪ್ರಧಾನ ಅರ್ಚಕ ಕೆ. ಜಯರಾಜ ಇಂದ್ರರ ನೇತೃತ್ವದಲ್ಲಿ ನವೀನ ಕುಮಾರ ಇಂದ್ರ ಮತ್ತು ಕೆ. ಮಹಾವೀರ ಇಂದ್ರರು ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸಿದರು. ಧರ್ಮಸ್ಥಳದ ಸೌಮ್ಯ ಸುಭಾಶ್ ಮತ್ತು ಬಳಗದವರ ಜಿನಭಜನೆಗಳ ಸುಶ್ರಾವ್ಯ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು. ಮೂಡಬಿದ್ರೆಯ ಸರ್ವೇಶ್ ಜೈನ್ ಮತ್ತು ಬಳಗದವರಿಂದ ಜಿನಭಕ್ತಿ ಗೀತೆಗಳ ಗಾಯನ ನಡೆಯಿತು. ಬಸದಿಯ ಅನುವಂಶಿಕ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ್ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಶ್ರೀನಾಥ್ ಬಳ್ಳಾಲ್, ವಿನಯಾ ಜೆ. ಬಳ್ಳಾಲ್, ವೈಶಾಲಿ ಬಳ್ಳಾಲ್, ಡಾ. ಪ್ರಿಯಾ ಬಳ್ಳಾಲ್, ವಿಜಯಾ ಬ್ಯಾಂಕ್ ನಿವೃತ್ತ ಮೇನೇಜರ್ ಎಂ. ಜಿನರಾಜ ಶೆಟ್ಟಿ ಮತ್ತು ಬಳ್ಳಾಲ್ ಕುಟುಂಬಸ್ಥರು ಉಪಸ್ಥಿತರಿದ್ದರು. 18 ಮಂದಿ ಚಂದನ ಷಷ್ಠಿ ನೋಂಪಿ ವ್ರತಧಾರಿಗಳಲ್ಲಿ 8 ಮಂದಿ 6 ವರ್ಷಗಳನ್ನು ಪೂರೈಸಿದ್ದು ನೋಂಪಿ ಉದ್ಯಾಪನೆ ಮಾಡಿದರು. ನೋಂಪಿ ವ್ರತಧಾರಿಗಳಾದ ಕುಂಡದಬೆಟ್ಟು ವಿನಯಮ್ಮ, ಸಬ್ರಬೈಲು ಸುಮಲತಾ ಜೀವಂಧರ ಚೌಟ ಮತ್ತು ಸುಜಾತ ಧನಕೀರ್ತಿ ಆರಿಗ ಧರ್ಮಸ್ಥಳ ಪ್ರಕಟಿಸಿದ “ಚಂದನ ಷಷ್ಠಿ ನೋಂಪಿ ವಿಧಾನ” ಕೃತಿಯನ್ನು ಸ್ವಾಮೀಜಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಕೃತಿಯನ್ನು ಎಲ್ಲರಿಗೂ ಶಾಸ್ತ್ರದಾನವಾಗಿ ವಿತರಿಸಲಾಯಿತು. ಸ್ವಾಮೀಜಿಯವರಿಂದ ಮಂಗಲಪ್ರವಚನ: ನೋಂಪಿಗಳಿಂದ ಕರ್ಮನಿರ್ಜರೆಯಾಗಿ ಮೋಕ್ಷ ಪ್ರಾಪ್ತಿ: ಉಪನ್ಯಾಸ ಹಾಗೂ ಕಠಿಣವ್ರತ ನಿಯಮಗಳ ಪಾಲನೆಯೊಂದಿಗೆ ಚಂದನ ಷಷ್ಠಿಯಂತಹ ಪವಿತ್ರ ನೋಂಪಿಗಳನ್ನು ಮಾಡಿದರೆ ನಮ್ಮ ಕರ್ಮಗಳ ನಿರ್ಜರೆಯಾಗಿ ರೋಗಗಳೂ ನಿವಾರಣೆಯಾಗಿ ಶಾಶ್ವತ ಸುಖವನ್ನೀಯುವ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಮಂಗಲಪ್ರವಚನ ನೀಡಿದ ಶ್ರವಣಬೆಳಗೊಳದ ಸ್ವಾಮೀಜಿ ಹೇಳಿದರು. ಹೆಚ್ಚಾಗಿ ನೋಂಪಿಗಳನ್ನು ಚಾತುರ್ಮಾಸದ ಅವಧಿಯಲ್ಲಿ ಭಾದ್ರಪದ ಮಾಸದಲ್ಲಿ ಮಾಡುತ್ತಾರೆ. ಏಕೆಂದರೆ ಭಾದ್ರಪದ ಮಾಸ ಬಹಳ ಹಿತಕರವಾಗಿದ್ದು ಆಗ ನಾವು ಮಾಡಿದ ಭಾವನೆಗಳು ಭದ್ರವಾಗುತ್ತವೆ. ಪರಿಶುದ್ಧ ತನು, ಮನದೊಂದಿಗೆ ವೃತ ನಿಯಮಗಳ ಪಾಲನೆಯೊಂದಿಗೆ ದೇವರು ಮತ್ತು ಗುರುಗಳ ಸೇವೆ, ಆರಾಧನೆ ಮಾಡಬೇಕು. ಆಧುನಿಕತೆಯ ನೆಪದಲ್ಲಿ ಎಂದೂ ಅಪವಿತ್ರ, ಅವಿನಯ ಮಾಡಬಾರದು ಎಂದು ಸ್ವಾಮೀಜಿ ಎಚ್ಚರಿಕೆ ನೀಡಿದರು. ಬಸದಿಯ ಅನುವಂಶೀಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್ ಅಧ್ಯಕ್ಷತೆ ವಹಿಸಿದರು. ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಧರ್ಮಸ್ಥಳದ ಡಾ. ಕೆ. ಜಯಕೀರ್ತಿ ಜೈನ್ ಸ್ವಾಗತಿಸಿದರು. ಕಾರ್ಯಕ್ರಮ ನಿರ್ವಹಿಸಿದ ಶಿಕ್ಷಕ ಧರಣೇಂದ್ರ ಕುಮಾರ್ ಕೊನೆಯಲ್ಲಿ ಧನ್ಯವಾದವಿತ್ತರು.

First Previous

Showing 5 of 23 pages

Next Last